ಸಾಗರ: ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ; ಸೈಕಲ್ ಸವಾರ ಮೃತ್ಯು

Update: 2022-07-02 02:31 GMT

ಸಾಗರ: ಕೆಎಸ್ಸಾರ್ಟಿಸಿ ಬಸ್ಸೊಂದು ಸೈಕಲ್ ಗೆ ಢಿಕ್ಕಿ ಹೊಡೆದ ಪರಿಣಾಮ ಪತ್ರಿಕಾ ವಿತರಕ ಸ್ಥಳದಲ್ಲೇ ಸಾವಿಗೀಡಾದ ಘಟನೆ ಪ್ರವಾಸಿ ಮಂದಿರದ ಬಳಿ ಶನಿವಾರ ಮುಂಜಾನೆ ನಡೆದಿದೆ.

ಬೆಳಲಮಕ್ಕಿಯ ಗಣೇಶ್ (20)ಮೃತಪಟ್ಟ ಪತ್ರಿಕಾ ವಿತರಕ. ಸೈಕಲ್ ಹಿಂಬದಿ ಸವಾರ ರಾಹುಲ್ ಎಂಬವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಬೆಂಗಳೂರಿನಿಂದ ಸಾಗರ ಮಾರ್ಗವಾಗಿ ಯಲ್ಲಾಪುರ ಹೋಗುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಸೈಕಲ್ ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News