ಕಾಸರಗೋಡು | ಎಡೆಬಿಡದೆ ಸುರಿಯುತ್ತಿರುವ ಮಳೆ: ಜನಜೀವನ ಅಸ್ತವ್ಯಸ್ತ

Update: 2022-07-02 04:09 GMT

ಕಾಸರಗೋಡು, ಜು.2: ಜಿಲ್ಲೆಯ ಕಳೆದ ಎರಡು ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಅಲ್ಲಲಿ ಅಪಾರ ನಾಶ ನಷ್ಟ ಉಂಟಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಶುಕ್ರವಾರ ರಾತ್ರಿ ಸುರಿದ ಭಾರೀ ಮಳೆಗೆ ಒಡೆಯಂಚಾಲ್ ಚೆರುಪ್ಪುಝದಲ್ಲಿ ಗುಡ್ಡ ಕುಸಿತ ಸಂಭವಿಸಿದೆ.
ಒಡೆಯಂಚಾಲ್ ನಲ್ಲಿ ರಸ್ತೆ ಮೇಲೆ ಗುಡ್ಡ ಕುಸಿದು ಬಿದ್ದಿದ್ದು, ಇದರಿಂದ ಸಂಚಾರ ಅಸ್ತವ್ಯಸ್ತಗೊಂಡಿದೆ. ಮಣ್ಣು ತೆರೆವುಗೊಳಿಸುವ ಕಾರ್ಯ ನಡೆಯುತ್ತಿದೆ. ಇನ್ನೊಂದೆಡೆ ಮನೆಯ ಹಿಂಬದಿಯ ಗುಡ್ಡ ಕುಸಿದು ಬಿದ್ದ ಘಟನೆಯೂ ನಡೆದಿದೆ. ಮನೆಗೆ ಭಾಗಶಃ ಹಾನಿ ಉಂಟಾಗಿದೆ.

ಜಿಲ್ಲೆಯಲ್ಲಿ ನದಿಗಳು ಉಕ್ಕಿ ಹರಿಯುತ್ತಿವೆ. ತಗ್ಗು ಪ್ರದೇಶದ ಹಲವು ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಹಲವು ರಸ್ತೆಗಳು ಹಾನಿಗೊಂಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News