ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಭಾಗವಹಿಸಲು ಹೈದರಾಬಾದಿಗೆ ತೆರಳಿದ ಸಿಎಂ ಬೊಮ್ಮಾಯಿ

Update: 2022-07-02 06:06 GMT

ಬೆಂಗಳೂರು, ಜು.2: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ತೆಲಂಗಾಣಕ್ಕೆ ತೆರಳುತ್ತಿದ್ದು, ರವಿವಾರ ಸಂಜೆ ಹಿಂದಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ

ತೆಲಂಗಾಣಕ್ಕೆ ತೆರಳುವ ಮುನ್ನ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಅವರು ಮಾತನಾಡುತ್ತಿದ್ದರು.

ಇಂದಿನಿಂದ ಎರಡು ದಿನಗಳ ಕಾಲ ತೆಲಂಗಾಣ ರಾಜ್ಯದ ಹೈದರಾಬಾದಿನಲ್ಲಿ ರಾಷ್ಟ್ರೀಯ ಬಿಜೆಪಿ ಕಾರ್ಯಕಾರಣಿ ಸಭೆ ನಡೆಯಲಿದೆ. ಸಭೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನಿಂದ ಹೈದರಾಬಾದಿಗೆ ತೆರಳಿದರು.

ಬಿಜೆಪಿ ರಾಷ್ಟ್ರೀಯ ಮುಖಂಡರು ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ದ ಸೇರಿದಂತೆ ಇನ್ನು ಅನೇಕ ಮುಖಂಡರು ಪಾಲ್ಗೊಳ್ಳಲಿದ್ದಾರೆ.  ಸಾಂದರ್ಭಿಕವಾಗಿ ಅವರನ್ನು ಭೇಟಿಯಾಗುವುದಾಗಿ ಮುಖ್ಯಮಂತ್ರಿ ಸುದ್ದಿಗಾರರಿಗೆ ಬೆಂಗಳೂರಿನಲ್ಲಿ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News