ಜು.23: ಬಂಟ್ವಾಳ ತಾಲೂಕು ಮಟ್ಟದ ಕಿರಾಅತ್ ಸ್ಪರ್ಧೆ

Update: 2022-07-02 06:30 GMT

ಬಂಟ್ವಾಳ, ಜು.2: ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ವತಿಯಿಂದ ಬಂಟ್ವಾಳ ತಾಲೂಕು ವ್ಯಾಪ್ತಿಯ ಮದ್ರಸ ವಿದ್ಯಾರ್ಥಿಗಳಿಗಾಗಿ ಕಿರಾಅತ್ ಸ್ಪರ್ಧೆಯನ್ನು ಜು.23ರಂದು ಪಾಣೆಮಂಗಳೂರು ಸಾಗರ್ ಆಡಿಟೋರಿಯಂನಲ್ಲಿ  ಆಯೋಜಿಸಲಾಗಿದೆ.

ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಥಮ ರೂ.10,000,  ದ್ವಿತೀಯ ರೂ.7,500,  ತೃತೀಯ ರೂ.5,000 ನಗದು ಹಾಗೂ ಪ್ರಶಸ್ತಿ ನೀಡಲಾಗುವುದು.

ಭಾಗವಹಿಸಲಿಚ್ಛಿಸುವ ವಿದ್ಯಾರ್ಥಿಗಳು ಈಗಾಗಲೇ ತಮ್ಮ ರೇಂಜ್ ಗೆ ನೀಡಲಾದ ಪ್ರವೇಶ ಪತ್ರವನ್ನು ಭರ್ತಿ ಮಾಡಿ ಜು.7ರೊಳಗೆ ತಲುಪಿಸತಕ್ಕದ್ದು. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ: 9448500874 ಅನ್ನು ಸಂಪರ್ಕಿಸಬಹುದು ಎಂದು ಸಂಸ್ಥೆಯ ಕಾರ್ಯದರ್ಶಿ ನೋಟರಿ ಅಬೂಬಕರ್ ವಿಟ್ಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News