ದೋಣಿಯಿಂದ ಬಿದ್ದು ಮೀನುಗಾರ ಮೃತ್ಯು
Update: 2022-07-02 16:02 GMT
ಕಾಪು : ದೋಣಿಯಲ್ಲಿ ಮೀನು ಹಿಡಿಯುತ್ತಿದ್ದ ಮೀನುಗಾರರೊಬ್ಬರು ಎದೆನೋವಿನಿಂದ ನೀರಿಗೆ ಬಿದ್ದು ಮೃತಪಟ್ಟ ಘಟನೆ ಜು.೧ರಂದು ಮಧ್ಯಾಹ್ನ ಮಟ್ಟು ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಮಟ್ಟು ಗ್ರಾಮದ ಗುಂಡಡ್ಕ ನಿವಾಸಿ ಗಣೇಶ್(೪೫) ಎಂದು ಗುರುತಿಸಲಾಗಿದೆ. ಇವರು ದೋಣಿಯಲ್ಲಿ ಮಟ್ಟು ಗ್ರಾಮದ ಪಾಪನಾಶಿನಿ ನದಿಯಲ್ಲಿ ಮೀನು ಹಿಡಿಯುತ್ತಿರುವಾಗ ಎದೆ ನೋವು ಕಾಣಿಸಿಕೊಂಡಿತ್ತೆನ್ನ ಲಾಗಿದೆ. ಇದರಿಂದ ಅವರು ದೋಣಿಯಿಂದ ನೀರಿಗೆ ಬಿದ್ದರು. ಕೂಡಲೇ ಬೇರೆ ದೋಣಿಯವರು ಬಂದು ಇವರನ್ನು ನೀರಿನಿಂದ ಮೇಲಕ್ಕೆ ಎತ್ತಿ ದಡಕ್ಕೆ ತಂದರು. ತೀವ್ರವಾಗಿ ಅಸ್ವಸ್ಥಗೊಂಡ ಇವರು ಉಡುಪಿ ಜಿಲ್ಲಾಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು.
ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.