ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿರುವ ಡಿಕೆಶಿ ಹಲ್ಲಿಲ್ಲದ ಹಾವು: ಬಿಜೆಪಿ
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರ ವಿರೋಧ ನಡುವೆಯೂ ಸಿದ್ದರಾಮೋತ್ಸವ ನಡೆಯಲಿದೆ ಎಂದಾದರೆ ಡಿಕೆಶಿ ಇದ್ದೂ ಇಲ್ಲದಂತಾಗಿದ್ದಾರೆ. ಸಿದ್ದರಾಮೊತ್ಸವ ಕೇವಲ ಸಿದ್ದರಾಮಯ್ಯರ ಜನ್ಮದಿನೋತ್ಸವವಲ್ಲ. ಅದು ಡಿಕೆಶಿಯ ರಾಜಕೀಯ ಬೆಳವಣಿಗೆಗೆ ತೋಡುತ್ತಿರುವ ಗುಂಡಿ. ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿರುವ ಡಿ.ಕೆ ಶಿವಕುಮಾರ್ ಹಲ್ಲಿಲ್ಲದ ಹಾವು ಎಂದು ಬಿಜೆಪಿ ಟ್ವೀಟ್ ಮಾಡಿದೆ.
'ಕನಕಪುರದ ಬಂಡೆಯೊಂದು ಪಕ್ಷ ಪೂಜೆಯೇ ಅಂತಿಮ, ವ್ಯಕ್ತಿ ಪೂಜೆಯಲ್ಲ ಎಂದು ಗುಡುಗುತ್ತಿದೆ. ಆ ಬಂಡೆಗೆ ಡೈನಾಮೆಟ್ ಇಡಲು ಸಿದ್ದರಾಮಯ್ಯ ಸಜ್ಜಾಗಿದ್ದಾರೆ. ಸಿದ್ದರಾಮೋತ್ಸವದ ಬಳಿಕ ಕನಕಪುರದ ಬಂಡೆ ಛಿದ್ರವಾಗಲಿದೆಯೇ?' ಎಂದು ಪ್ರಶ್ನಿಸಿದೆ.
'ಚುನಾವಣೆ ಹತ್ತಿರ ಬರುತ್ತಿದ್ದಂತೆ ಸಿದ್ದರಾಮಯ್ಯ ಅವರಿಗೆ ಸಿಎಂ ಕುರ್ಚಿಯ ಕನಸು ಹೆಚ್ಚಾಗುತ್ತಿದೆ. ಕೆಪಿಸಿಸಿ ಅಧ್ಯಕ್ಷರು ವ್ಯಕ್ತಿಗಿಂತ ಪಕ್ಷ ಮುಖ್ಯ ಎನ್ನುತ್ತಿದ್ದಾರೆ. ನಾನಿಲ್ಲದೆ ಕಾಂಗ್ರೆಸ್ ಇಲ್ಲ ಎಂದು ಸಿದ್ದರಾಮಯ್ಯ ಎನ್ನುತ್ತಿದ್ದಾರೆ. ಆದರೆ ರಾಜ್ಯದ ಜನತೆ ಕಾಂಗ್ರೆಸ್ ಪಕ್ಷವನ್ನೇ ತಿರಸ್ಕರಿಸಿದ್ದಾರೆ' ಎಂದು ಬಿಜೆಪಿ ಹೇಳಿದೆ.
ಕೆಪಿಸಿಸಿ ಅಧ್ಯಕ್ಷರ ವಿರೋಧ ನಡುವೆಯೂ ಸಿದ್ದರಾಮೋತ್ಸವ ನಡೆಯಲಿದೆ ಎಂದಾದರೆ ಡಿಕೆಶಿ ಇದ್ದೂ ಇಲ್ಲದಂತಾಗಿದ್ದಾರೆ.
— BJP Karnataka (@BJP4Karnataka) July 4, 2022
ಸಿದ್ದರಾಮೊತ್ಸವ ಕೇವಲ ಸಿದ್ದರಾಮಯ್ಯರ ಜನ್ಮದಿನೋತ್ಸವವಲ್ಲ. ಅದು ಡಿಕೆಶಿಯ ರಾಜಕೀಯ ಬೆಳವಣಿಗೆಗೆ ತೋಡುತ್ತಿರುವ ಗುಂಡಿ.
ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿರುವ @DKShivakumar ಹಲ್ಲಿಲ್ಲದ ಹಾವು!#ಕಾಂಗ್ರೆಸ್ಕಲಹ