ಜು.9: ಬಜಗೋಳಿಯಲ್ಲಿ ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮ

Update: 2022-07-04 06:32 GMT

ಕಾರ್ಕಳ, ಜು.4: ಕನ್ನಡ ಸಾಹಿತ್ಯ ಪರಿಷತ್ತು ಕಾರ್ಕಳ ತಾಲೂಕು ಘಟಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ ಸಹಯೋಗದಲ್ಲಿ 'ಅಮೃತ ಭಾರತಿಗೆ ಕನ್ನಡದಾರತಿ' ಕಾರ್ಯಕ್ರಮ ಜು.9ರಂದು ಬಜಗೋಳಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ.

ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್‌ ಕುಮಾರ್‌ ಕಾರ್ಯಕ್ರಮ ಉದ್ಘಾಟಿಸುವರು. ಕಸಾಪ ಕಾರ್ಕಳ ತಾಲೂಕು ಘಟಕದ ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದು, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಹಿತಿ ಮುನಿರಾಜ ರೆಂಜಾಳ ಉಪನ್ಯಾಸ ನೀಡಲಿರುವರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಕಸಾಪ ಉಡುಪಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಕಾರ್ಕಳ ತಹಶೀಲ್ದಾರ್ ಪ್ರದೀಪ್ ಕುರುಡೇಕರ್‌, ತಾ.ಪಂ. ಸಿಇಒ ಗುರುದತ್ತ ಎಂ.ಎನ್., ಮುಡಾರು ಗ್ರಾ.ಪಂ. ಅಧ್ಯಕ್ಷ ಸುರೇಶ್ ಶೆಟ್ಟಿ, ಫೆಡರೇಶನ್‌ ಆಫ್‌ ಕರ್ನಾಟಕ ಕ್ವಾರಿ ಆ್ಯಂಡ್ ಕ್ರಷರ್‌ ಓನರ್ಸ್‌ ಅಸೋಸಿಯೇಶನ್‌ ರಾಜ್ಯಾಧ್ಯಕ್ಷ ರವೀಂದ್ರ ಶೆಟ್ಟಿ ಬಜಗೋಳಿ, ಬಿಇಒ ವೆಂಕಟೇಶ್ ಜಿ. ನಾಯಕ್, ಕಾಲೇಜು ಅಭಿವೃದ್ಧಿ ಸಮಿತಿ ಅ‍ಧ್ಯಕ್ಷ ಮಹಾವೀರ್ ಜೈನ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಚಂದ್ರ ಶೇಖರ್ ಪೂಜಾರಿ, ಪ್ರಾಂಶುಪಾಲ ಲಕ್ಷೀನಾರಾಯಣ ಕೆ.ಪಿ., ಸ.ಪ. ಪೂ. ಕಾಲೇಜಿನ ಮುಖ್ಯಶಿಕ್ಷಕ ಬಸವರಾಜ ತಾವರಗಿ, ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ, ಪದಾಧಿಕಾರಿಗಳು ಉಪಸ್ಥಿತರಿರುವರು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News