ಕಾವೂರು | 2 ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ

Update: 2022-07-04 06:52 GMT

ಮಂಗಳೂರು, ಜು.4: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ನಗರ ಹೊರವಲಯದ ಕಾವೂರಿನ ಚೇತನ್ ಕುಮಾರ್ (28) ಎಂಬವರ ಮೃತದೇಹ ಇಂದು ಕೂಳೂರಿನಲ್ಲಿ ಪತ್ತೆಯಾಗಿದೆ.

ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದ್ಧು, ವರದಿ ಬಂದ ಬಳಿಕ ಸಾವಿಗೆ ಕಾರಣ ಏನು ಎಂಬುದು ತಿಳಿಯಲಿದೆ ಎಂದು‌ ಕಾವೂರು ಇನ್‌ಸ್ಪೆಕ್ಟರ್ ತಿಳಿಸಿದ್ದಾರೆ.

ಚೇತನ್ ಕುಮಾರ್ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದರು ಎನ್ನಲಾಗಿದೆ. ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇಂದು ಬೆಳಗ್ಗೆ ಕೂಳೂರು ಬಳಿ ನದಿಯಲ್ಲಿ ಅಪರಿಚಿತ ಮೃತದೇಹವೊಂದು ಪತ್ತೆಯಾಗಿತ್ತು. ಚೇತನ್‌ ಅವರ ಮನೆಮಂದಿ ಈ ಮೃತದೇಹವನ್ನು ಚೇತನ್‌ನದ್ದೆಂದು ಗುರುತಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News