ಚಿಕ್ಕಮಗಳೂರು | ಭಾರೀ ಮಳೆ : ಹೆಬ್ಬಾಳೆ ಸೇತುವೆ ಮುಳುಗಡೆ

Update: 2022-07-04 07:16 GMT

ಚಿಕ್ಕಮಗಳೂರು, ಜು4: ಜಿಲ್ಲೆಯ ಕುದುರೆಮುಖ ಸುತ್ತಮುತ್ತ ಇಡೀ ಕಳೆದ ರಾತ್ರಿಯಿಂದ ಧಾರಾಕಾರ ಮಳೆ ಸುರಿಯುತ್ತಿದೆ.

ಭಾರೀ ಮಳೆಗೆ ಭದ್ರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಈ ವರ್ಷ ಮೊದಲ ಬಾರಿಗೆ ಮುಳುಗಡೆಯಾಗಿದೆ. ಕಳಸ- ಹೊರನಾಡು ದೇವಸ್ಥಾನ ಸಂಪರ್ಕದ ಈ ಸೇತುವೆ ಮೇಲೆ ಎರಡು ಅಡಿಯಷ್ಟು ನೀರು ಹರಿಯುತ್ತಿದೆ. ಇದರಿಂದ ಕಳಸ- ಹೊರನಾಡು ದೇವಸ್ಥಾನ ಸಂಪರ್ಕ ಕಡಿತಗೊಂಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News