ಪುತ್ತೂರು: ಹಿಂದೂ ಜಾಗರಣ ವೇದಿಕೆ ವಿರುದ್ಧ ದೂರು
Update: 2022-07-04 16:28 GMT
ಪುತ್ತೂರು: ಹಿಂದೂ ಜಾಗರಣ ವೇದಿಕೆಯ ವತಿಯಿಂದ ಜೂ.29ರಂದು ಪುತ್ತೂರು ನಗರದ ದರ್ಬೆ ಸರ್ಕಲ್ನಲ್ಲಿ ನಡೆಸಿದ ಪ್ರತಿಭಟನಾ ಸಭೆಯಲ್ಲಿ ಶ್ರೀಕೃಷ್ಣ ಉಪಾಧ್ಯಾಯ ಹಾಗೂ ನರಸಿಂಹ ಮಾಣಿ ಇಸ್ಲಾಂ ಧರ್ಮವನ್ನು ನಿಂದಿಸಿ, ಕೋಮು ಪ್ರಚೋದನೆ ನೀಡಿ, ಬೆದರಿಕೆ ಒಡ್ಡಿದ್ದಾರೆ ಎಂದು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಪುತ್ತೂರು ತಾಲೂಕು ಮುಸ್ಲಿಂ ಒಕ್ಕೂಟ ವತಿಯಿಂದ ಪುತ್ತೂರು ನಗರ ಪೊಲೀಸ್ ಠಾಣೆಗೆ ಮತ್ತು ಡಿವೈಎಸ್ಪಿಗೆ ದೂರು ನೀಡಲಾಗಿದೆ.
ಅನುಮತಿ ಪಡೆಯದೆಯೇ ಪ್ರತಿಭಟನೆ ನಡೆಸಿದ್ದಲ್ಲದೇ ರಸ್ತೆ ಬಂದ್ ಕೂಡಾ ಮಾಡಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಸಂದರ್ಭದಲ್ಲಿ ಪುತ್ತೂರು ತಾಲೂಕು ಮುಸ್ಲಿಂ ಒಕ್ಕೂಟದ ಸಂಚಾಲಕ ಅಶ್ರಫ್ ಕಲ್ಲೇಗ, ನ್ಯಾಯವಾದಿ ನೂರುದ್ದೀನ್ ಸಾಲ್ಮರ, ಇಬ್ರಾಹಿಂ ಸಾಗರ್ ಉಪಸ್ಥಿತರಿದ್ದರು.