ಶಾಸಕ ಝಮೀರ್‌ ಅಹ್ಮದ್ ಮನೆ ಮೇಲೆ ಎಸಿಬಿ ದಾಳಿ ವಿಚಾರ: ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ

Update: 2022-07-05 07:22 GMT

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಲ್ಲಿ ಶಾಸಕ ಝಮೀರ್‌ ಅಹ್ಮದ್‌ ಖಾನ್‌ ಅವರ ನಿವಾಸ, ಕಚೇರಿ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಳಿ ಮಾಡಿ, ಶೋಧ ನಡೆಸುತ್ತಿದ್ದು, ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿರುವ ಸಿಎಂ ಬೊಮ್ಮಾಯಿ, 'ಇದೆಲ್ಲ ಬಾಕಿ ಪ್ರಕರಣಗಳಿಗೆ ಸಂಬಂಧಿಸಿದಂತೆ ದಾಳಿ ನಡೆದಿದ್ದು, ವಿಚಾರಣೆ‌ ನಡೆಯುತ್ತಿದೆ. ಇದು ಹೊಸದೇನಲ್ಲ, ದಾಖಲೆಗಳ ಆಧಾರದ ಮೇಲೆ ಎಸಿಬಿ ದಾಳಿ ಆಗುತ್ತಿರುತ್ತೆ. ಅದು ನಿರಂತರವಾದ ಪ್ರಕ್ರಿಯೆ ಎಂದು ಹೇಳಿದರು.

'ಎಸಿಬಿ ದಾಳಿ ವೇಳೆ ಪ್ರತಿಭಟನೆ ನಡೆಸುವುದು ರಾಜಕೀಯ ಪ್ರೇರಿತ. ಆದರೆ ಕರ್ತವ್ಯ ಮಾಡುವ ಅಧಿಕಾರಿಗಳಿಗೆ ಯಾವುದೇ ತೊಂದರೆ ಆಗಲ್ಲ' ಎಂದು ತಿಳಿಸಿದರು. 

ಇದನ್ನೂ ಓದಿ... ಶಾಸಕ ಝಮೀರ್‌ ಅಹ್ಮದ್‌ ಮನೆ, ಕಚೇರಿ ಮೇಲೆ ಎಸಿಬಿ ದಾಳಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News