ಬಂಟ್ವಾಳ; ನೇತ್ರಾವತಿ ನದಿ ಪಾಲಾಗಿದ್ದ ಯುವಕನ ಮೃತದೇಹ ಪತ್ತೆ

Update: 2022-07-06 08:52 GMT
ಅಶ್ವಿಥ್

ಉಳ್ಳಾಲ: ಸಜಿಪಪಡು ಗ್ರಾಮದ ತಲೆಮೊಗರು ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಸ್ನೇಹಿತರೊಂದಿಗೆ ರವಿವಾರ ಸಂಜೆ ಈಜಲು ಹೋಗಿ ನೀರುಪಾಲಾಗಿದ್ದ ಯುವಕನ ಮೃತದೇಹ ಉಳ್ಳಾಲದ ಕೋಟೆಪುರ ಕೋಡಿಯ ಸಮುದ್ರ ತೀರದಲ್ಲಿ ಬುಧವಾರ ಪತ್ತೆಯಾಗಿದೆ.

ಮೃತ ಯುವಕನನ್ನು ಅಶ್ವಿಥ್ (19) ಎಂದು ಗುರುತಿಸಲಾಗಿದೆ.

ಸಜಿಪಪಡು ತಲೆಮೊಗರುವಿನ ನಾಗೇಶ್ ಗಾಣಿಗ ಎಂಬವರ ಮನೆಯಲ್ಲಿ ಮಗುವನ್ನ ತೊಟ್ಟಿಲು ತೂಗುವ  ಸಮಾರಂಭದಲ್ಲಿ ಪಾಲ್ಗೊಂಡಿದ್ದ ಅಶ್ವಿಥ್ ನಂತರ ಗೆಳೆಯರೊಂದಿಗೆ ಸಮೀಪದ ನೇತ್ರಾವತಿ ನದಿಗೆ ಈಜಲು ತೆರಳಿದ್ದರು ಎಂದು ತಿಳಿದುಬಂದಿದೆ. ಈ ವೇಳೆ ಅಶ್ವಿಥ್ ಮತ್ತು ಹರ್ಷ ನೀರು ಪಾಲಾಗಿದ್ದರು. ಜತೆಯಲ್ಲಿದ್ದ ಯುವಕರು ಹರ್ಷನನ್ನ ರಕ್ಷಿಸಿ ಮೇಲಕ್ಕೆತ್ತಿದ್ದರು. ನಾಪತ್ತೆಯಾಗಿದ್ದ ಅಶ್ವಿಥ್‌ ಮೃತದೇಹ ಇಂದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News