ಆ. 3ರಂದು ದಾವಣಗೆರೆಯಲ್ಲಿ 'ಸಿದ್ದರಾಮೋತ್ಸವ'

Update: 2022-07-06 14:32 GMT

ಮಂಗಳೂರು : ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ 75 ವರ್ಷದ ಹುಟ್ಟುಹಬ್ಬದ ಅಂಗವಾಗಿ 'ಸಿದ್ದರಾಮೋತ್ಸವ' ಕಾರ್ಯಕ್ರಮವನ್ನು ಆ. 3ರಂದು ದಾವಣಗೆರೆಯಲ್ಲಿ ಅವರ ಅಭಿಮಾನಿಗಳು ಹಾಗೂ ಹಿತೈಷಿಗಳು ಹಮ್ಮಿಕೊಂಡಿದ್ದಾರೆ.

ಸುಮಾರು 10ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದೆ‌. ಈ ಉತ್ಸವ 23ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ. ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ಹಾಗೂ ಹೊಸ ಚೈತನ್ಯ ನೀಡಲಿದೆ. ಮಾಜಿ ಸಚಿವರು, ಶಾಸಕರು, ಸಂಸದರು ಹಾಗೂ ಹಿರಿಯ ನಾಯಕರನ್ನೊಳಗೊಂಡ 'ಅಮೃತ ಮಹೋತ್ಸವ ಸಮಿತಿ' ರಚಿಸಲಾಗಿದ್ದು. ಮಾಜಿ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜಾ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ ಎಂದು ಪ್ರಕಟನೆ ತಿಳಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News