ಬಾದಾಮಿ: ಎರಡು ಗುಂಪುಗಳ ಮಧ್ಯೆ ಘರ್ಷಣೆ, ನಿಷೇಧಾಜ್ಞೆ ಜಾರಿ
Update: 2022-07-06 18:22 GMT
ಬಾಗಲಕೋಟೆ: ಬಾದಾಮಿ ತಾಲೂಕಿನ ಕೆರೂರು ಬಸ್ ನಿಲ್ದಾಣದಲ್ಲಿ ಬುಧವಾರ ಸಂಜೆ ಎರಡು ಗುಂಪಿನ ಯುವಕರ ನಡುವೆ ಗಲಾಟೆ ನಡೆದಿದಿದ್ದು, ಮೂವರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.
ಗಲಾಟೆಯಲ್ಲಿ ಲಕ್ಷ್ಮಣ್ ಕಟ್ಟಿಮನಿ ಹಾಗೂ ಅರುಣ್ ಕಟ್ಟಿಮನಿಗೆ ಚಾಕು ಇರಿದಿದ್ದಾರೆ ಎನ್ನಲಾಗಿದೆ. ಮಾರ್ಕೆಟ್ ನಲ್ಲಿದ್ದ 2 ತಳ್ಳುವ ಗಾಡಿಗೆ ಬೆಂಕಿ ಹಚ್ಚಿದ್ದು, ತರಕಾರಿ ಅಂಗಡಿ ಸೇರಿದಂತೆ ಹಲವು ಅಂಗಡಿಗಳನ್ನು ಧ್ವಂಸಗೊಳಿಸಿದ್ದಾರೆ.
ಗಾಯಗೊಂಡವರನ್ನು ಬಾಗಲಕೋಟೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ಇರುವುದರಿಂದ ಪೊಲೀಸರು ಮೊಕ್ಕಾಂ ಹೂಡಿದ್ದಾರೆ.
ಗಲಾಟೆ ಹಿನ್ನೆಲೆಯಲ್ಲಿ ಇಂದು ಮಧ್ಯರಾತ್ರಿಯಿಂದ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಮುಂಜಾಗ್ರತಾ ಕ್ರಮವಾಗಿ ಗುರುವಾರ ಕೆರೂರಿನ ಶಾಲಾ–ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.