ಮಹಿಳೆಗೆ ಬೆದರಿಕೆ ಆರೋಪ: ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಬಂಟ್ವಾಳ ಜೆ.ಎಂ.ಎಫ್.ಸಿ ನ್ಯಾಯಾಲಯ ಆದೇಶ

Update: 2022-07-06 18:26 GMT

ಬಂಟ್ವಾಳ: ಬರಿಮಾರು ಗ್ರಾಮದ ಕೃಷಿಕ ಕುಟುಂಬದ ಮಹಿಳೆಯೋರ್ವರಿಗೆ ಜಮೀನು ವಿಚಾರಕ್ಕೆ ಸಂಬಂಧಿಸಿ ದಂತೆ ಫೋನ್ ಮುಖಾಂತರ ಕೊಲೆ ಬೆದರಿಕೆ ಒಡ್ಡಿದ  ಆರೋಪಿ ವಲ್ಟಿ ಯಾನೆ ವಾಲ್ಟರ್ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಬಂಟ್ವಾಳ ವೃತ್ತ ನಿರೀಕ್ಷಕರಿಗೆ ಬಂಟ್ವಾಳ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರು ಆದೇಶಿಸಿದ್ದಾರೆ.

ಸದ್ರಿ  ಮಹಿಳೆಗೆ ಪೋನಿನಲ್ಲಿ ಅವ್ಯಾಚ್ಯ ಶಬ್ದಗಳಿಂದ ಬೈದು, ಅಶ್ಲೀಲ ವಾಗಿ ನಿಂದಿಸಿದ್ದು, ಈ ಬಗ್ಗೆ ಪೋಲೀಸ್ ಠಾಣೆಗೆ ಹಾಗು ದ.ಕ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದರೂ ಆರೋಪಿತನ ವಿರುದ್ಧ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ. ಬಳಿಕ ಮಹಿಳೆ ನ್ಯಾಯಾಲಯದ ಮುಂದೆ ಪಿರ್ಯಾದಿ ಸಲ್ಲಿಸಿರುತ್ತಾರೆ. ನ್ಯಾಯಾಲಯವು ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಆರೋಪಿತನ ವಿರುದ್ಧ ಪ್ರಕರಣ ದಾಖಲಿಸಿ ವರದಿ ಸಲ್ಲಿಸುವಂತೆ ಬಂಟ್ವಾಳ ವೃತ್ತ ನಿರೀಕ್ಷಕರಿಗೆ ಆದೇಶಿಸಿದೆ.

ಇದರಂತೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಆರೋಪಿ ಬರಿಮಾರು ಗ್ರಾಮದ ಬಲ್ಯ ನಿವಾಸಿ ವಲ್ಟಿ ಯಾನೆ ವಾಲ್ಟರ್ ವಿರುದ್ಧ ಕಲಂ 504,506,507,509 ರಂತೆ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News