ತುಮಕೂರು | ಭೀಕರ ರಸ್ತೆ ಅಪಘಾತ: ಮೂವರು ಸ್ಥಳದಲ್ಲೇ ಮೃತ್ಯು

Update: 2022-07-07 04:46 GMT

ತುಮಕೂರು, ಜು.7: ಕಾರು ಮತ್ತು ಕೆಎಸ್ಸಾರ್ಟಿಸಿ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟ ಘಟನೆ ತಾಲೂಕಿನ ತಿಮ್ಮಲಾಪುರ ಮತ್ತಿಹಳ್ಳಿ ಗೇಟ್ ಬಿ ಎಚ್ ರಸ್ತೆ 206  ಹತ್ತಿರ ಇಂದು ಬೆಳಗ್ಗೆ ಸಂಭವಿಸಿದೆ.

ಮೃತರನ್ನು ಕಾರಿನಲ್ಲಿದ್ದ ಪ್ರಯಾಣಿಕರು ಎಂದು ಗುರುತಿಸಲಾಗಿದೆ.

ತಿಪಟೂರಿನಿಂದ ಅರಸೀಕೆರೆಯತ್ತ ತೆರಳುತ್ತಿದ್ದ ಕಾರಿಗೆ ಶಿವಮೊಗ್ಗದಿಂದ ಬೆಂಗಳೂರಿನತ್ತ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಬಸ್ ರಸ್ತೆ ಬದಿಗೆ ಇಳಿದಿದೆ.

ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News