ಶಿವಮೊಗ್ಗ | ಮುಂದುವರಿದ ಧಾರಾಕಾರ ಮಳೆ: ಶಾಲೆ-ಕಾಲೇಜುಗಳಿಗೆ ರಜೆ

Update: 2022-07-07 06:15 GMT

ಶಿವಮೊಗ್ಗ, ಜು.7: ಶಿವಮೊಗ್ಗ ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿದಿದೆ.ಈ ನಡುವೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಜುಲೈ 7ರಂದು ಗುರುವಾರ ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ರಜೆ ಘೋಷಿಸಿದ್ದಾರೆ.

ಜಿಲ್ಲೆಯ ಸಾಗರ, ತೀರ್ಥಹಳ್ಳಿ ಹಾಗೂ ಸೊರಬ ತಾಲೂಕಿನ ಶಾಲೆಗಳಿಗೆ ಮಾತ್ರ ಬುಧವಾರ ರಜೆ ಘೋಷಿಸಲಾಗಿತ್ತು. ಗುರುವಾರ ಬೆಳಗ್ಗೆ ಈ ಆದೇಶ ಮಾರ್ಪಡಿಸಿರುವ ಜಿಲ್ಲಾಧಿಕಾರಿ ಜಿಲ್ಲೆಯ ಎಲ್ಲ ತಾಲ್ಲೂಕುಗಳಿಗೂ ಅದನ್ನು ವಿಸ್ತರಿಸಿದ್ದಾರೆ.

ಮಳೆಯಿಂದಾಗಿ ಗಾಜನೂರಿನ ತುಂಗಾ ಜಲಾಶಯಕ್ಕೆ ಒಳಹರಿವು ಹೆಚ್ಚಿದ್ದು, ಜಲಾಶಯದಿಂದ ನದಿಗೆ 45959 ಕ್ಯೂಸೆಕ್ ನೀರು ಹರಿಯಬಿಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News