ಪಾವಂಜೆ | ಲಾರಿಗೆ ಕಾರು ಢಿಕ್ಕಿ: ಕಾರು ಜಖಂ

Update: 2022-07-07 07:05 GMT

ಸುರತ್ಕಲ್ , ಜು.7: ಲಾರಿ ಮತ್ತು ಕಾರೊಂದರ ಮಧ್ಯೆ ಅಪಘಾತ ಸಂಭವಿಸಿ ಕಾರು ಜಖಂಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಪಾವಂಜೆ ಸೇತುವೆ ಬಳಿ ಗುರುವಾರ ನಡೆದಿದೆ.

ಅಪಘಾತದಲ್ಲಿ‌‌ ಕಾರಿನಲ್ಲಿದ್ದವರಿಗೆ ಅಲ್ಪ ಪ್ರಮಾಣದ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಮಂಗಳೂರಿನಿಂದ ಉಡುಪಿ ಕಡೆ‌ ತೆರಳುತ್ತಿದ್ದ ಲಾರಿ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ ಹಿಂದಿನಿಂದ ಬರುತ್ತಿದ್ದ ಕಾರು ಲಾರಿಯ ಹಿಂಭಾಗಕ್ಕೆ ಢಿಕ್ಕಿ ಹೊಡೆಯಿತೆನ್ನಲಾಗಿದೆ. ಮಂಗಳೂರು ಉತ್ತರ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲಿಸಿದ್ದಾರೆ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News