ಜು.8 ಮತ್ತು 9ರಂದು ಉಡುಪಿ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ರಜೆ : ಡಿಸಿ ಕೂರ್ಮಾರಾವ್

Update: 2022-07-07 13:56 GMT

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮುಂದಿನ ಎರಡು ದಿನವೂ ರೆಡ್ ಅಲರ್ಟ್ ಘೋಷಣೆಯಾಗಿರುವುದರಿಂದ ಹೆಚ್ಚಿನ ಮಳೆಯಾಗುವ ಸೂಚನೆ ಇದ್ದು, ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜು.8 ಶುಕ್ರವಾರ ಹಾಗೂ ಜು.9ರ ಶನಿವಾರದಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು, ಪದವಿಪೂರ್ವ, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್, ಐಟಿಐ ಸೇರಿದಂತೆ ಎಲ್ಲಾ ಸರಕಾರಿ, ಅನುದಾನಿತ ಹಾಗೂ ಖಾಸಗಿ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಆದೇಶ ಹೊರಡಿಸಿದ್ದಾರೆ.

ಈ ಸಂದರ್ಭದಲ್ಲಿ ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗೃತೆ ವಹಿಸಬೇಕು. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ, ಪ್ರವಾಸಿಗರು ಹಾಗೂ ಸಾರ್ವಜನಿಕರು ನದಿ ತೀರಕ್ಕೆ, ಸಮುದ್ರ ತೀರಕ್ಕೆ ತೆರಳದಂತೆ ಸೂಚನೆಗಳನ್ನು ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News