ಐಪಿಎಲ್ ಹರಾಜು ನಿರ್ಬಂಧ ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

Update: 2022-07-07 13:52 GMT

ಬೆಂಗಳೂರು, ಜು.7: ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಕ್ರಿಕೆಟ್ ಟೂರ್ನಿಗೆ ಆಟಗಾರರನ್ನು ಹರಾಜು ಹಾಕುವುದಕ್ಕೆ ತಡೆ ನೀಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.                        

ಈ ಸಂಬಂಧ ಸಾಮಾಜಿಕ ಕಾರ್ಯಕರ್ತ ವೆಂಕಟೇಶ್ ಶೆಟ್ಟಿ ಸೇರಿ ಐವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.

ವಕೀಲರ ವಾದ ಆಲಿಸಿದ ನ್ಯಾಯಪೀಠ, ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿ ಈಗಾಗಲೇ ಮುಗಿದಿದೆ. ಐಪಿಎಲ್ ಆಟಗಾರರ ಹರಾಜು ಸಹ ಮುಕ್ತಾಯವಾಗಿದೆ. ಅಲ್ಲದೆ, ಇಂತಹದೇ ಪಿಐಎಲ್ ಅರ್ಜಿಯನ್ನು ಹೊಸದಿಲ್ಲಿ ಹೈಕೋರ್ಟ್ ವಜಾಗೊಳಿಸಿದೆ. ಜತೆಗೆ ಅರ್ಜಿಯಲ್ಲಿನ ಕೆಲ ತಾಂತ್ರಿಕ ಲೋಪಗಳನ್ನು ಸರಿಪಡಿಸಿಲ್ಲ ಎಂದು ತಿಳಿಸಿ ಅರ್ಜಿಯನ್ನು ವಜಾಗೊಳಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News