ಚಾಮರಾಜನಗರ: ಸಿಲಿಂಡರ್ ತುಂಬಿದ್ದ ಲಾರಿ-ಟಾಟಾ ಏಸ್ ನಡುವೆ ಢಿಕ್ಕಿ; ಓರ್ವ ಮೃತ್ಯು

Update: 2022-07-08 06:16 GMT

ಚಾಮರಾಜನಗರ: ಸಿಲಿಂಡರ್ ತುಂಬಿದ್ದ ಲಾರಿ ಮತ್ತು ಟಾಟಾ ಏಸ್ ನಡುವೆ ಢಿಕ್ಕಿ ಸಂಭವಿಸಿ ಓರ್ವ ಚಾಲಕ ಮೃತಪಟ್ಟ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಕಣ್ಣೇಗಾಲ ಸರ್ಕಲ್ ನಲ್ಲಿ ಇಂದು ಬೆಳಗ್ಗೆ ನಡೆದಿದೆ.

ಕೇರಳಕ್ಕೆ ತೆರಳುತ್ತಿದ್ದ ಸಿಲಿಂಡರ್ ತುಂಬಿದ್ದ ಲಾರಿ ಹಾಗು ಕೇರಳ ಕಡೆಯಿಂದ ಗುಂಡ್ಲುಪೇಟೆ ಪಟ್ಟಣಕ್ಕೆ ಬರುತ್ತಿದ್ದ ಟಾಟಾ ಏಸ್ ನಡುವೆ ಢಿಕ್ಕಿ ಸಂಭವಿಸಿ ಟಾಟಾ ಏಸ್ ಚಾಲಕ ನವಾಝ್‌ ಎಂಬವರು ಸ್ಥಳದಲ್ಲೇ ಮೃತಪಟಿದ್ದು, ಓರ್ವ ಗಂಭೀರ ಗಾಯಗೊಂಡಿರುವ ಬಗ್ಗೆ ತಿಳಿದುಬಂದಿದೆ.

ಗಾಯಾಳುವನ್ನು ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News