ಕಾರ್ಕಳ: ಹಾನಿಗೊಳಗಾದ ಪ್ರದೇಶಗಳಿಗೆ ಸಚಿವ ಸುನಿಲ್ ಕುಮಾರ್ ಭೇಟಿ

Update: 2022-07-08 08:39 GMT

ಕಾರ್ಕಳ: ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದ ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹಾನಿಗೊಳಗಾದ ಪ್ರದೇಶಗಳಿಗೆ  ಇಂದು ರಾಜ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ  ವಿ. ಸುನಿಲ್ ಕುಮಾರ್  ಭೇಟಿ ನೀಡಿ ಪರಿಶೀಲಿಸಿದರು.

ಹೆಬ್ರಿ ತಾಲೂಕು ಅಂಡಾರು ಗ್ರಾಮದ ಪೈಥಾಳ ಎಂಬಲ್ಲಿನ ಸಂಪರ್ಕ ಸೇತುವೆ ಹಾನಿಯಾಗಿರುವ ಮತ್ತು ಕಾರ್ಕಳ ತಾಲೂಕು ಸಾಣೂರು ಗ್ರಾಮದ ಸರಕಾರಿ ಪದವಿಪೂರ್ವ ಕಾಲೇಜು ಬಳಿ ಭೂ ಕುಸಿತ ಆದ ಸ್ಥಳಗಳಿಗೆ ಇಂದು ಅಧಿಕಾರಿಗಳು ಹಾಗೂ ಸ್ಥಳೀಯರೊಂದಿಗೆ ಭೇಟಿ ನೀಡಿದರು. 

ಮಳೆಯಿಂದ ಹಾನಿಯಾದ ಪ್ರದೇಶಗಳಲ್ಲಿ ತುರ್ತು ದುರಸ್ತಿ ಹಾಗೂ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಸಚಿವರು ಮಳೆ ಹಾನಿ ಮತ್ತು ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಸರ್ವ ರೀತಿಯಲ್ಲೂ ಸನ್ನದ್ಧರಾಗಿರುವಂತೆ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳಿಗೆ ಸೂಚಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News