×
Ad

ಕಡಬ: ರಸ್ತೆ ಅಪಘಾತ; ರಿಕ್ಷಾ ಚಾಲಕನಿಗೆ ಗಂಭೀರ ಗಾಯ

Update: 2022-07-08 16:49 IST

ಕಡಬ: ಟಾಟಾ ಏಸ್ ಹಾಗೂ ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿದ ಪರಿಣಾಮ ರಿಕ್ಷಾ ಚಾಲಕ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ - ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪದವು ಸಮೀಪದ ಎರ್ಮಾಳ ಎಂಬಲ್ಲಿ ಶುಕ್ರವಾರ ನಡೆದಿದೆ.

ಗಾಯಾಳು ಚಾಲಕನನ್ನು ಮರ್ಧಾಳ ಸಮೀಪದ ಸುಳ್ಯ ಮೇಪತ್ತಪಾಲು ನಿವಾಸಿ ಹರೀಶ್ ಎಂದು ಗುರುತಿಸಲಾಗಿದೆ.

ಕುಂತೂರು ಪದವು ಸಮೀಪದ ಎರ್ಮಾಳ ಎಂಬಲ್ಲಿ ಈ ಘಟನೆ ಸಂಭವಿಸಿದ್ದು, ಗಂಭೀರ ಗಾಯಗೊಂಡ ರಿಕ್ಷಾ ಚಾಲಕನನ್ನು ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News