ಜಪಾನ್ ಮಾಜಿ ಪ್ರಧಾನಿ ಶಿಂಝೋ ಅಬೆ ನಿಧನ ಹಿನ್ನೆಲೆ: ಶನಿವಾರ ರಾಜ್ಯದಲ್ಲಿ ಶೋಕಾಚರಣೆ

Update: 2022-07-08 17:02 GMT

ಬೆಂಗಳೂರು, ಜು.8: ಜಪಾನ್ ದೇಶದ ಮಾಜಿ ಪ್ರಧಾನಿ ಶಿಂಝೋ ಅಬೆ ನಿಧನದ ಹಿನ್ನೆಲೆಯಲ್ಲಿ ಜು.9ರಂದು ದೇಶದಾದ್ಯಂತ ಒಂದು ದಿನದ ಶೋಕಾಚರಣೆ ಆಚರಿಸಲು ಭಾರತ ಸರಕಾರ ನಿರ್ಧರಿಸಿರುವ ಹಿನ್ನೆಲೆಯಲ್ಲಿ, ರಾಜ್ಯದಲ್ಲಿಯೂ ಒಂದು ದಿನ ಶೋಕಾಚರಣೆ ಆಚರಿಸಲಾಗುವುದು.

ಈ ದಿನದಂದು ಯಾವುದೆ ಅಧಿಕೃತ ಮನೋರಂಜನಾ ಕಾರ್ಯಕ್ರಮ ಇರುವುದಿಲ್ಲ ಹಾಗೂ ನಿಯಮಿತವಾಗಿ ರಾಷ್ಟ್ರಧ್ವಜವನ್ನು ಹಾರಿಸಲ್ಪಡುವ ಸರಕಾರದ ಎಲ್ಲ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಲಾಗುವುದು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ(ಶಿಷ್ಟಾಚಾರ) ಅಧಿಸೂಚನೆ ಹೊರಡಿಸಿದೆ.

ಸಿಎಂ ಪ್ರವಾಸ ರದ್ದು:  ಶಿಂಝೋ ಅಬೆ ನಿಧನದ ಹಿನ್ನೆಲೆಯಲ್ಲಿ ದೇಶದಾದ್ಯಂತ ಕೇಂದ್ರ ಸರಕಾರವು ಶೋಕಾಚರಣೆ ಘೋಷಿಸಿರುವುದರಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜು.9 ಹಾಗೂ 10ರಂದು ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಹಮ್ಮಿಕೊಂಡಿದ್ದ ಪ್ರವಾಸ ಕಾರ್ಯಕ್ರಮವನ್ನು ರದ್ದುಪಡಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News