ಅಕ್ರಮ ಮರ ಸಾಗಾಟ ಆರೋಪ: ಓರ್ವ ಸೆರೆ

Update: 2022-07-08 17:33 GMT

ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಕಣಿಯೂರು ಎಂಬಲ್ಲಿ ಅಕ್ರಮವಾಗಿ ಅಕೇಶಿಯಾ ಮರದ ದಿಮ್ಮಿಗಳನ್ನು ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಸ್ಥಳೀಯರ ಸಹಕಾರದೊಂದಿಗೆ ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ತಂಡ ಪತ್ತೆ ಹಚ್ಚಿ, ಓರ್ವನನ್ನು ಬಂಧಿಸಿ, ಲಾರಿಯನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.

ಬಂಧಿತ ಆರೋಪಿ ಲಾರಿ ಚಾಲಕ ಪಾಣೆಮಂಗಳೂರು ಬೋಗೋಳಿ ನಿವಾಸಿ ಅಶ್ರಫ್ ಎಂದು ಪೊಲೀಸರು ತಿಳಿಸಿದ್ದು, ಇನ್ನಿಬ್ಬರು ಪರಾರಿಯಾಗಿರುವುದಾಗಿ ಅವರು ಮಾಹಿತಿ ನೀಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News