ಮಂಡ್ಯ | ವಿದ್ಯುತ್ ತಗುಲಿ ಗಾಯಗೊಂಡಿದ್ದ ಫುಟ್‍ಬಾಲ್ ಆಟಗಾರ ಮೃತ್ಯು

Update: 2022-07-09 13:21 GMT
ವಿಶ್ವಾಸ್ - ಮೃತ ಫುಟ್‍ಬಾಲ್ ಆಟಗಾರ

ಮಂಡ್ಯ, ಜು.9: ವಿದ್ಯುತ್ ತಗುಲಿ ಗಂಭೀರ ಅಸ್ವಸ್ಥಗೊಂಡಿದ್ದ ನಗರದ ಗುತ್ತಲು ಬಡಾವಣೆಯ ನಿವಾಸಿ ರಾಷ್ಟ್ರೀಯ ಫುಟ್‍ಬಾಲ್ ಆಟಗಾರ ವಿಶ್ವಾಸ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ನಗರದ ಸ್ವರ್ಣ ಫುಟ್‍ಬಾಲ್ ಸಂಸ್ಥೆ ಆಯೋಜಿಸಿದ್ದ ಹೊನಲು ಬೆಳಕಿನ ಫುಟ್‍ಬಾಲ್ ಪಂದ್ಯಕ್ಕಾಗಿ ತಯಾರಿಲ್ಲಿದ್ದ ವಿಶ್ವಾಸ್, ಜು.1ರಂದು ಮನೆಯಲ್ಲಿ ಆಕಸ್ಮಿಕವಾಗಿ ವಿದ್ಯುತ್ ಶಾಕ್‍ಗೆ ಒಳಗಾಗಿ ಗಂಭೀರವಾಗಿ ಅಸ್ವಸ್ಥರಾಗಿದ್ದರು.

ವಿಶ್ವಾಸ್ ಅವರನ್ನು ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ಸೇರಿಸಲಾಗಿತ್ತು. ಶನಿವಾರ ಶಸ್ತ್ರಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ನಗರದ ಪಿಇಎಸ್ ಕಾಲೇಜಿನ ಬಿ.ಕಾಂ. ವಿದ್ಯಾರ್ಥಿಯಾಗಿದ್ದ ವಿಶ್ವಾಸ್ ಅವರ ಚಿಕಿತ್ಸೆಗೆ ಸಹಪಾಠಿ ವಿದ್ಯಾರ್ಥಿಗಳು ಸಾರ್ವಜನಿಕರಿಂದ ಹಣ ಸಂಗ್ರಹಿಸಿದರೂ ಪ್ರಯೋಜನವಾಗಲಿಲ್ಲ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News