ಜುಲೈ 13ರಂದು ಕೆಸಿಎಫ್ ಒಮಾನ್ ಪ್ರಾಯೋಜಕತ್ವದ ಮಾಝಿನ್ ಹೆರಿಟೇಜ್ ಉದ್ಘಾಟನೆ

Update: 2022-07-15 09:11 GMT

ಮಂಗಳೂರು: ಕರ್ನಾಟಕ ಕಲ್ಚರಲ್ ಫೌಂಡೇಷನ್ (KCF) ಒಮಾನ್ ಪ್ರಾಯೋಜಕತ್ವದ ಇಹ್ಸಾನ್ ಕರ್ನಾಟಕ ಎಜು ಆ್ಯಂಡ್ ಚಾರಿಟೇಬಲ್ ಟ್ರಸ್ಟ್, ದಾರುಲ್ ಉಲೂಮ್ ಇಹ್ಸಾನಿಯ್ಯ ಇದರ ಉದ್ಘಾಟನೆಯನ್ನು ಜುಲೈ13ರಂದು ಹಝ್ರತ್ ಮುಹಮ್ಮದ್‌ ಫಾಝಿಲ್ ರಝ್ವಿ ಕಾವಲ್ ಕಟ್ಟೆ ನೆರವೇರಿಸಲಿದ್ದಾರೆ.

ಇಹ್ಸಾನ್ ಕರ್ನಾಟಕ ಇದರ ಅಧ್ಯಕ್ಷರಾದ ಎಂಐ ಅಬ್ದುಲ್ ಹಫೀಝ್ ಸಅದಿ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷ ಮೌಲಾನ ಶಾಫಿ ಸಅದಿ  ನೆರವೇರಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಕೆಸಿಎಫ್ ಅಂತ‌ರ್ ರಾಷ್ಟ್ರೀಯ ಸಮಿತಿ ಅಧ್ಯಕ್ಷ ಹಾಜಿ ಶೈಖ್ ಬಾವ, ಕೆಸಿಎಫ್ ಒಮಾನ್ ರಾಷ್ಟ್ರೀಯ ಸಮಿತಿಯ ಅಧ್ಯಕ್ಷ ಅಯ್ಯೂಬ್ ಕೋಡಿ, ಕೆಸಿಎಫ್ ಅಂತರ್ ರಾಷ್ಟ್ರೀಯ ಸಮಿತಿಯ ಇಹ್ಸಾನ್ ವಿಭಾಗದ ಅಧ್ಯಕ್ಷ ಹಾಜಿ ಅಬೂಬಕ್ಕರ್ ರೈಸ್ಕೊ, ಎಸ್‌ ವೈ ಎಸ್ ರಾಜ್ಯಾ‌ಧ್ಯಕ್ಷ ಡಾ. ಅಬ್ದುಲ್ ರಶೀದ್ ಝೈನಿ ಕಾಮಿಲ್ ಸಖಾಫಿ, ಎಸ್‌ಎಸ್‌ಎಫ್ ರಾಜ್ಯಾಧ್ಯಕ್ಷ ಅಬ್ದುಲ್ ಲತೀಫ್ ಸಅದಿ, ಸ್ಥಳೀಯ ಶಾಸಕ ಎಸ್.ವಿ. ರಾಮಚಂದ್ರ, ಇಹ್ಸಾನ್ ಕರ್ನಾಟಕ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಹಮೀದ್ ಬಜ್ಪೆ, ಸಯ್ಯದ್ ಸೈಫುದ್ದೀನ್ ಅಲ್ ಹೈದ್ರೋಸಿ ತಂಙಳ್ ಕೊಡಗು, ಎಸ್‌ ಜೆ ಎಂ  ರಾಜ್ಯಾಧ್ಯಕ್ಷ ಅಬ್ದುರ್ರಹ್ಮಾನ್ ಮದನಿ ಜೆಪ್ಪು, ಮಾಝಿನ್ ಹೆರಿಟೇಜ್ ಕಟ್ಟಡ ನಿರ್ಮಾಣ ಸಮಿತಿಯ ಚಯರ್ಮೆನ್ ಇಕ್ಬಾಲ್ ಬೊಲ್ಮಾರ್ ಬರ್ಕ, ಮಾಝಿನ್ ಹೆರಿಟೇಜ್ ಕಟ್ಟಡ ನಿರ್ಮಾಣ ಸಮಿತಿ ಕನ್ವೀನರ್ ಸಯ್ಯದ್ ಆಬಿದ್ ಅಲ್ ಹೈದ್ರೋಸಿ ತಂಙಳ್ ಕೊಡಗು, ಕೆಸಿಎಫ್ ಒಮಾನ್ ಕೋಶಾಧಿಕಾರಿ ಆರಿಫ್ ಕೋಡಿ,  ಕೆಸಿಎಫ್ ಕೌನ್ಸಿಲರ್ ಇಬ್ರಾಹಿಮ್ ಹಾಜಿ ಅತ್ರಾಡಿ, ಕೆಸಿಎಫ್  ಒಮಾನ್ ಇಮಾಮ್ ನವವಿ ಮದರಸ ಪ್ರಾಂಶುಪಾಲರಾದ ಉಬೈದುಲ್ಲಾ ಸಖಾಫಿ ಮಿತ್ತೂರು, ಇಹ್ಸಾನ್ ಕರ್ನಾಟಕ ಉಪಾಧ್ಯಕ್ಷ ಬಿಎ ಇಬ್ರಾಹಿಮ್ ಸಖಾಫಿ, ಇಹ್ಸಾನ್ ಕರ್ನಾಟಕ ಕಾರ್ಯದರ್ಶಿ ಶಾಹುಲ್ ಹಮೀದ್ ಮುಸ್ಲಿಯಾರ್ ಶಿವಮೊಗ್ಗ, ಇಹ್ಸಾನ್ ಕರ್ನಾಟಕ ಕೋಶಾಧಿಕಾರಿ ಅಬ್ದುಲ್ ರಹ್ಮಾನ್ ರಝ್ವಿ ಕಲ್ ಕಟ್ಟ, ಇಹ್ಸಾನ್ ಕರ್ನಾಟಕ ದಾಯಿ ಮುಹಮ್ಮದ್‌ ಇಸ್ಹಾಕ್ ಸಖಾಫಿ, ರಾಜ್ಯ ವಕ್ಫ್ ಸದಸ್ಯ ಯಾಕೂಬ್ ಹೊಸನಗರ, ಇಹ್ಸಾನ್ ನಾಯಕರಾದ ಇಸ್ಮಾಯಿಲ್ ಸಖಾಫಿ ಕೊಂಡಂಗೇರಿ, ಇಸ್ಮಾಯಿಲ್ ಸಅದಿ ಕಿನ್ಯ, ಹಮೀದ್ ಮಡಿಕೇರಿ, ಸಿರಾಜುದ್ದೀನ್ ಸಖಾಫಿ ಕನ್ಯಾನ, ಅಬ್ದುರಹ್ಮಾನ್ ಮೊಗರ್ಪಣೆ ಸುಳ್ಯ, ಮಾಝಿನ್ ಹೆರಿಟೇಜ್ ಕಟ್ಟಡ ಕಾಮಗಾರಿಯ ಕಾಂಟ್ರಾಕ್ಟರ್ ಅಕ್ಬರ್ ಉಪ್ಪಳ್ಳಿ ಹಾಗೂ ಕೆಸಿಎಫ್ ಒಮಾನ್ ರಾಷ್ಟ್ರೀಯ, ಝೋನ್, ಸೆಕ್ಟರ್ ನಾಯಕರು, ಸದಸ್ಯರು, ಎಸ್‌ ವೈ ಎಸ್,‌ ಎಸ್‌ ಎಸ್‌ ಎಫ್‌ ನಾಯಕರು ಮತ್ತು ಸದಸ್ಯರು ಭಾಗವಹಿಸಲಿದ್ದಾರೆ ಎಂದು ಕೆಸಿಎಫ್ ಒಮಾನ್ ಮೀಡಿಯಾ ವಿಭಾಗದ ಅಧ್ಯಕ್ಷ ಸಿದ್ದೀಕ್ ಮಾಂಬ್ಲಿ‌ ಸುಳ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News