ಕಡಬ: ಉಕ್ಕಿ ಹರಿಯುತ್ತಿರುವ ಹೊಳೆಗೆ ಬಿದ್ದ ಕಾರು, ಇಬ್ಬರು ಯುವಕರು ನೀರು ಪಾಲು

Update: 2022-07-10 09:21 GMT

ಕಡಬ, ಜು.10. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಉಕ್ಕಿ ಹರಿಯುತ್ತಿರುವ ಹೊಳೆಗೆ ಬಿದ್ದ ಘಟನೆ ಶನಿವಾರ ತಡರಾತ್ರಿ ಕಾಣಿಯೂರು ಸಮೀಪದ ಬೈತಡ್ಕ ಎಂಬಲ್ಲಿ ನಡೆದಿದ್ದು ಇದೀಗ ನೀರುಪಾಲಾದವರ ಗುರುತು ಪತ್ತೆಯಾಗಿದೆ.

ನೀರುಪಾಲಾದ ಯುವಕರನ್ನು ವಿಟ್ಲದ ಕುಂಡಡ್ಕ ನಿವಾಸಿ ಧನುಷ್ (26) ಹಾಗೂ ಮಂಜೇಶ್ವರ ನಿವಾಸಿ ಧನುಷ್(21) ಎಂದು ಗುರುತಿಸಲಾಗಿದೆ. ಇವರು ಶನಿವಾರ ತಡರಾತ್ರಿ ಮಾರುತಿ 800 ಕಾರಿನಲ್ಲಿ ಪುತ್ತೂರಿನಿಂದ ಕಾಣಿಯೂರು ಕಡೆಗೆ ತೆರಳುತ್ತಿದ್ದ ವೇಳೆ ಬೈತಡ್ಕ ಗೌರಿಹೊಳೆಗೆ ಬಿದ್ದಿದ್ದು, ಈ ದೃಶ್ಯವು ಬೈತಡ್ಕ ಜುಮಾ ಮಸೀದಿಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಕಾರಿನಲ್ಲಿದ್ದವರು ನೀರುಪಾಲಾಗಿದ್ದಾರೆ.

ಸ್ಥಳಕ್ಕೆ ಪುತ್ತೂರು ಡಿವೈಎಸ್ಪಿ ಗಾನ ಪಿ.ಕುಮಾರ್, ಬೆಳ್ಳಾರೆ ಠಾಣಾ ಉಪ ನಿರೀಕ್ಷಕ ರುಕ್ಮ ನಾಯ್ಕ್ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಭೇಟಿ ನೀಡಿದ್ದು, ಸಾರ್ವಜನಿಕರ ಸಹಾಯದೊಂದಿಗೆ ಕಾರನ್ನು ಮೇಲಕ್ಕೆತ್ತಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News