×
Ad

ಬೈಂದೂರು: ಮೇಲ್ಛಾವಣಿ ಕುಸಿದ ಶಾಲೆಗೆ ಉಡುಪಿ ಜಿಲ್ಲಾಧಿಕಾರಿ ಭೇಟಿ

Update: 2022-07-10 17:27 IST

ಕುಂದಾಪುರ: ಸತತ ಮಳೆಯಿಂದಾಗಿ ಮೇಲ್ಛಾವಣಿ ಹಾಗೂ ಗೋಡೆ ಕುಸಿದ ಬೈಂದೂರು ತಾಲೂಕಿನ ಉಪ್ಪುಂದ ಗ್ರಾ.ಪಂ.ವ್ಯಾಪ್ತಿಯ ಅಮ್ಮನವರ ತೊಪ್ಲು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಅವರು ರವಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂದರ್ಭ ಮಾಧ್ಯಮಗಳ ಜೊತೆ ಮಾತನಾಡಿದ ಅವರು, 60 ಮಕ್ಕಳು ಈ ಶಾಲೆಯಲ್ಲಿ ಓದುತ್ತಿದ್ದು ಇತ್ತೀಚೆಗೆ ನಿರ್ಮಾಣವಾದ ಕೊಠಡಿಯಲ್ಲಿ ಮಳೆಗಾಲದಲ್ಲಿ ಆ ವಿದ್ಯಾರ್ಥಿಗಳನ್ನು ಕೂರಿಸಲಾಗುತ್ತಿತ್ತು. ಶಿಥಲಾವಸ್ಥೆಯಲ್ಲಿರುವ ಕಟ್ಟಡವನ್ನು ಕಳೆದ ಮೂರು ವರ್ಷಗಳಿಂದ ಬಳಕೆ ಮಾಡುತ್ತಿಲ್ಲ. ಈ ಕಟ್ಟಡವನ್ನು ಇಂಜಿನಿಯರ್ ಮೂಲಕ ನೆಲಸಮ ಮಾಡಿ ನೂತನ ಕೊಠಡಿಗೆ ಬೇಡಿಕೆ ಇಡಬೇಕಿತ್ತು. ಮುಂದಿನ ದಿನದಲ್ಲಿ ಹೆಚ್ಚಿನ ಕೊಠಡಿಗೆ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದರು.

ಈ ಸಂದರ್ಭ‌ ಉಡುಪಿ ಜಿ.ಪಂ ಸಿಇಒ ಪ್ರಸನ್ನ ಎಚ್, ಬೈಂದೂರು ತಹಶಿಲ್ದಾರ್ ಕಿರಣ ಗೌರಯ್ಯ,  ಬೈಂದೂರು ಮಂಡಲ ಬಿಜೆಪಿ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ,ಉಪ್ಪುಂದ ಗ್ರಾ.ಪಂ ಅಧ್ಯಕ್ಷೆ ಲಕ್ಷ್ಮೀ ಇದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News