×
Ad

ಜುಲೈ 12, 13ರಂದು ಉಡುಪಿ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಪ್ರವಾಸ

Update: 2022-07-11 19:24 IST

ಉಡುಪಿ : ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜುಲೈ ೧೨ ಮತ್ತು ೧೩ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಜು.೧೨ರಂದು ರಾತ್ರಿ ೮:೩೦ಕ್ಕೆ ಉಡುಪಿಗೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ. ಜು.೧೩ರಂದು ಬೆಳಗ್ಗೆ ೯ ಗಂಟೆಗೆ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಳೆ ಹಾನಿಗೆ ಸಂಬಂಧಿಸಿದಂತೆ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸುವರು.

ಬಳಿಕ ೧೦:೩೦ಕ್ಕೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳಕ್ಕೆ ತೆರಳಿ ಅಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ, ಮಳೆ ಹಾನಿಗೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸುವರು.

ಅಪರಾಹ್ನ ೨:೪೫ಕ್ಕೆ ಭಟ್ಕಳದಿಂದ ರಸ್ತೆ ಮಾರ್ಗವಾಗಿ ಹೊರಟು, ಉಡುಪಿ ಜಿಲ್ಲೆಯಲ್ಲಿ  ಮಳೆಯಿಂದ ಹಾನಿಗೊಳ ಗಾದ ಪ್ರದೇಶಗಳ ವೀಕ್ಷಣೆ ನಡೆಸಲಿದ್ದಾರೆ. ಸಂಜೆ ೬:೩೦ಕ್ಕೆ ಉಡುಪಿಗೆ ಆಗಮಿಸುವ ಮುಖ್ಯಮಂತ್ರಿಗಳು, ಇಲ್ಲಿಂದ ಮಂಗಳೂರಿನ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಿ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಪ್ರಯಾಣಿಸುವರು.

ಮುಖ್ಯಮಂತ್ರಿಗಳೊಂದಿಗೆ ರಾಜ್ಯದ ಕಂದಾಯ ಸಚಿವ ಆರ್.ಅಶೋಕ್ ಅವರೂ ಪ್ರವಾಸದುದ್ದಕ್ಕೂ ಜೊತೆಗೂಡಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News