ಲಂಚ ಪ್ರಕರಣ: ಐಎಎಸ್ ಅಧಿಕಾರಿ ಮಂಜುನಾಥ್ ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್

Update: 2022-07-11 16:41 GMT

ಬೆಂಗಳೂರು, ಜು.11: ಲಂಚ ಪಡೆದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಐಎಎಸ್ ಅಧಿಕಾರಿ ಜೆ.ಮಂಜುನಾಥ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನಗರದ ಸಿಸಿಎಚ್ 23ರ ಎಸಿಬಿ ವಿಶೇಷ ಕೋರ್ಟ್ ಸೋಮವಾರ ತಿರಸ್ಕರಿಸಿದೆ.

ಜೆ.ಮಂಜುನಾಥ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಪೂರ್ಣಗೊಳಿಸಿ ನಗರದ ಸಿಸಿಎಚ್ 23ರ ಎಸಿಬಿ ಕೋರ್ಟ್ ಇತ್ತೀಚೆಗೆ ಆದೇಶವನ್ನು ಕಾಯ್ದಿರಿಸಿತ್ತು. ಸೋಮವಾರ ಆದೇಶವನ್ನು ಪ್ರಕಟಿಸಿದ್ದು, ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

ಬೆಂಗಳೂರು ನಗರ ಡಿಸಿಯಾಗಿದ್ದ ವೇಳೆ ಜಮೀನು ವ್ಯಾಜ್ಯ ಇತ್ಯರ್ಥಪಡಿಸಲು ವ್ಯಕ್ತಿಯೊಬ್ಬರಿಂದ ಐದು ಲಕ್ಷ ರೂ.ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆ.ಮಂಜುನಾಥ್ ಅವರನ್ನು ಎಸಿಬಿ ಅಧಿಕಾರಿಗಳು ಯಶವಂತಪುರದ ಅವರ ನಿವಾಸದಲ್ಲಿ ಬಂಧಿಸಿದ್ದರು.

       

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News