ಜು.13ರಂದು ಮುಖ್ಯಮಂತ್ರಿ ಬೊಮ್ಮಾಯಿ ಭಟ್ಕಳಕ್ಕೆ

Update: 2022-07-11 17:20 GMT

ಭಟ್ಕಳ ; ಜು.12 ಮತ್ತು 13 ಎರಡು ದಿನಗಳ ಕಾಲ ಮಳೆ ಪೀಡಿತ ಕರಾವಳಿ ಜಿಲ್ಲೆಗಳ ಪ್ರವಾಸದಲ್ಲಿರುವ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜು.13 ರಂದು ಉಡುಪಿಯಿಂದ ರಸ್ತೆಯ ಮೂಲಕ ಮದ್ಯಾಹ್ನ 12ಗಂಟೆಗೆ ಭಟ್ಕಳಕ್ಕೆ ಭೇಟಿ ನೀಡಲಿದ್ದಾರೆ ಎಂದು ವರದಿಯಾಗಿದೆ.

ದಿನಾಂಕ 12-7-2022 ಹೊರಟ ಮುಖ್ಯಮಂತ್ರಿಗಳು ದಿನಾಂಕ 13-7-20222 ರಂದು ಬೆಳಿಗ್ಗೆ 9 ಗಂಟೆಗೆ ಮಳೆ ಹಾನಿಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ, ನಂತರ ಅಲ್ಲಿಂದ ರಸ್ತೆಯ ಮೂಲಕ ಉತ್ತರ ಕನ್ನಡ ಜಿಲ್ಲೆಯ ಭಟ್ಕಳಕ್ಕೆ ಮದ್ಯಾಹ್ನ 12 ಗಂಟೆಗೆ ಬರಲಿದ್ದು ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ಹಾಗೂ ವೀಕ್ಷಣೆ ಮಾಡಲಿದ್ದಾರೆ,  ನಂತರ ಮಳೆ ಹಾನಿಗೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ. ನಂತರ ಭಟ್ಕಳದಿಂದ ಪುನಃ ಉಡುಪಿಗೆ ತೆರಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News