×
Ad

ಪಾವಂಜೆ: ನಂದಿನಿ ನದಿಗೆ ಹಾರಿದ ಅಂಚೆ ಕಚೇರಿ ಉದ್ಯೋಗಿ ನಾಪತ್ತೆ

Update: 2022-07-12 23:57 IST

ಮಂಗಳೂರು : ಮಂಡ್ಯ ಮೂಲದ ಪ್ರಸ್ತುತ ಮಂಗಳೂರಿನಲ್ಲಿ ನೆಲೆಸಿರುವ ಯುವಕನೋರ್ವ ಪಾವಂಜೆ ನಂದಿನಿ ನದಿಗೆ ಹಾರಿ ನಾಪತ್ತೆಯಾಗಿರುವ ಬಗ್ಗೆ ಮಂಗಳವಾರ ರಾತ್ರಿ ವರದಿಯಾಗಿದೆ.

ಮಂಗಳೂರಿನಲ್ಲಿ ಪೋಸ್ಟ್ ಆಫೀಸ್ ಉದ್ಯೋಗಿ ರಾಕೇಶ್ ಗೌಡ ಪಾವಂಜೆ ನಂದಿನಿ ನದಿಗೆ ಹಾರಿದವರು ಎಂದು ತಿಳಿದುಬಂದಿದೆ.

ನದಿಗೆ ಹಾರುವ ಮುನ್ನ  ರಾಕೇಶ್ ಗೌಡ ತನ್ನ ಮೊಬೈಲ್ ಹಾಗೂ ಇನ್ನಿತರ ವಸ್ತುಗಳನ್ನು ಬೈಕ್‌ ನಲ್ಲಿ ಇಟ್ಟಿದ್ದರು ಎನ್ನಲಾಗಿದೆ. ಅಲ್ಲದೆ ತಾನು ನದಿಗೆ ಹಾರುತ್ತಿರುವ ಕುರಿತು ಸಂಬಂಧಿಕರಿಗೆ ವಾಟ್ಸ್ಆ್ಯಪ್‌ ನಲ್ಲಿ ಲೊಕೇಶನ್ ಕಳುಹಿಸಿದ್ದರು ಎಂದು ತಿಳಿದುಬಂದಿದೆ.

ರಾಕೇಶ್ ಗೌಡ ಅವರ ಮಾವ ಅಬಕಾರಿ ಇಲಾಖೆಯ ಡಿವೈಎಸ್ಪಿ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಅಬಕಾರಿ ಇಲಾಖೆಯ ಸಿಬ್ಬಂದಿ ಹಾಗು ಮುಲ್ಕಿ ಮತ್ತು ಸುರತ್ಕಲ್ ಠಾಣೆ ವ್ಯಾಪ್ತಿಯ ಪೊಲೀಸರು ತೆರಳಿದ್ದಾರೆ. 

ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News