ಸಿದ್ದರಾಮಯ್ಯಗೆ ಇಷ್ಟ ಇದೆಯೋ ಇಲ್ಲವೋ, ಬೇರೆಯವರು ಅವರ ವ್ಯಕ್ತಿಪೂಜೆ ಮಾಡ್ತಿದ್ದಾರೆ: ಡಿ.ಕೆ ಸುರೇಶ್

Update: 2022-07-13 12:49 GMT

ಬೆಂಗಳೂರು: 'ಸಿದ್ದರಾಮಯ್ಯ ಅವರ ಜೀವನದ ಸಾಧನೆ 75 ವರ್ಷದ ಈ ಅಮೃತ ಮಹೋತ್ಸವವನ್ನು ನಾವೆಲ್ಲರೂ ಸೇರಿ ಅರ್ಥಪೂರ್ಣವಾಗಿ ಆಚರಿಸಬೇಕಿದೆ' ಎಂದು ಸಂಸದ ಡಿಕೆ ಸುರೇಶ್ ಹೇಳಿದ್ದಾರೆ. 

ಬುಧವಾರ ನಗರದ ಅರಮನೆ ಮೈದಾನದಲ್ಲಿ ಸಿದ್ದರಾಮಯ್ಯರ 75ನೇ ಅಮೃತ ಅಮೃತ ಮಹೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಡಿಕೆ ಸುರೇಶ್, ಸಿದ್ದರಾಮಯ್ಯ ಅವರಿಗೆ ಇಷ್ಟವಿದ್ಯೋ ಇಲ್ಲವೋ, ಬೇರೆಯವರು ಅವರ ವ್ಯಕ್ತಿಪೂಜೆ ಮಾಡ್ತಿದ್ದಾರೆ ಎಂದು ಹೇಳಿದರು.

'ಸ್ವಾತಂತ್ರ್ಯ ಭಾರತದ 75 ನೇ ಅಮೃತ ಮಹೋತ್ಸವ ಹಾಗೂ ಸಿದ್ದರಾಮಯ್ಯ ಅವರ ಹುಟ್ಟು ಹಬ್ಬವನ್ನು ಜೊತೆಯಾಗಿ ಬಿಂಬಿಸುತ್ತಾ ಕಾರ್ಯಕ್ರಮ ಮಾಡುವುದು ಸೂಕ್ತ ಎಂಬುದು ವೈಯಕ್ತಿಕವಾದ ಅಭಿಪ್ರಾಯವಾಗಿದೆ ಎಂದರು. 
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News