ಹೆಬ್ರಿ: ತೋಟದಲ್ಲಿಯೇ ಕುಸಿದು ಬಿದ್ದು ಕೃಷಿಕ ಮೃತ್ಯು
Update: 2022-07-13 16:14 GMT
ಹೆಬ್ರಿ : ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ಕೃಷಿಕರೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಬೇಳಂಜೆ ಗ್ರಾಮದ ಕೆಪ್ಪೆಕೆರೆಯ ಈಶ್ವರ ನಗರ ಎಂಬಲ್ಲಿ ನಡೆದಿದೆ.
ಮೃತರನ್ನು ಈಶ್ವರ ನಗರದ ಕೃಷ್ಣ ನಾಯ್ಕ್ (26) ಎಂದು ಗುರುತಿಸಲಾಗಿದೆ.
ಇವರು ಜು.12ರಂದು ಸಂಜೆ ಮನೆ ಸಮೀಪದ ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದು, ಈ ವೇಳೆ ವಿಪರೀತ ಎದೆನೋವು ಕಾಣಿಸಿಕೊಂಡು ಅಲ್ಲಿಯೇ ಕುಸಿದು ಬಿದ್ದರೆನ್ನಲಾಗಿದೆ. ತೀವ್ರವಾಗಿ ಅಸ್ವಸ್ಥಗೊಂಡ ಅವರು ಜು.13ರಂದು ಮುಂಜಾನೆ ಮಣಿಪಾಲ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ.
ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.