×
Ad

ಸುಳ್ಯ ತಾಲೂಕಿನ ಹಲವೆಡೆ ಮತ್ತೆ ಭೂಕಂಪನ: ಜನರಲ್ಲಿ ಆತಂಕ

Update: 2022-07-15 11:34 IST

ಸುಳ್ಯ, ಜು.15: ತಾಲೂಕಿನ ತೊಡಿಕಾನ, ಗೂನಡ್ಕ ಹಾಗೂ ಕೊಡಗು ಜಿಲ್ಲೆಯ ಚೆಂಬು ಪ್ರದೇಶದಲ್ಲಿ ಶುಕ್ರವಾರ ಬೆಳಗ್ಗೆ ಮತ್ತೊಮ್ಮೆ ಭೂಮಿ ಕಂಪಿಸಿದೆ.

ಇಂದು ಬೆಳಗ್ಗೆ 10:08ರ ಸುಮಾರಿಗೆ ತಾಲೂಕಿನ ಹಲವೆಡೆ ಮತ್ತೆ ಭೂಮಿ ಕಂಪಿಸಿದ ಅನುಭವ ಹಲವರಿಗೆ ಆಗಿದೆ.

 ಭಾರೀ ಸದ್ದಿನೊಂದಿಗೆ ಭೂಮಿ ಕಂಪಿಸಿದೆ ಎಂದು ಜನರು ಹೇಳಿದ್ದಾರೆ. ಈ ಸದ್ದು ಹಾಗೂ ಕಂಪನವು ಅರಂತೋಡು, ಸಂಪಾಜೆ, ಗೂನಡ್ಕ ಹಾಗೂ ಆಸುಪಾಸಿನ ಪ್ರದೇಶದಲ್ಲಿ ಅನುಭವಕ್ಕೆ ಬಂದಿರುವುದಾಗಿ ತಿಳಿದುಬಂದಿದೆ.

ಈ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಆಗಾಗ ಭೂಮಿ ಕಂಪಿಸಿದೆ. ಸುಮಾರು 10ಕ್ಕೂ ಅಧಿಕ ಬಾರಿ ಇದುವರೆಗೆ ಭೂಮಿ ಕಂಪಿಸಿದ್ದು, ಜನರು ಆತಂಕಕ್ಕೀಡಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News