ತಮಿಳನಾಡು ಸಿಎಂಗೆ ಕೋವಿಡ್ ಧೃಡ; ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ ಬೊಮ್ಮಾಯಿ

Update: 2022-07-15 18:18 GMT

ಬೆಂಗಳೂರು, ಜು. 15: ‘ತಮಿಳನಾಡಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಅವರು ಶೀಘ್ರದಲ್ಲೇ ಗುಣಮುಖರಾಗಲಿ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಭ ಹಾರೈಸಿದ್ದಾರೆ.

ಶುಕ್ರವಾರ ಈ ಕುರಿತು ಟ್ವೀಟ್ ಮಾಡಿರುವ ಅವರು, ಚೆನೈನಲ್ಲಿರುವ ಕಾವೇರಿ ಆಸ್ಪತ್ರೆಯಲ್ಲಿ ಎಂ.ಕೆ.ಸ್ಟಾಲಿನ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಟಾಲಿನ್ ಕೋವಿಡ್ ಸೋಂಕಿನಿಂದ ಶೀಘ್ರ ಗುಣಮುಖರಾಗಲಿ. ಮತ್ತೆ ತಮ್ಮ ಕಚೇರಿಗೆ ಬಂದು ಎಂದಿನಂತೆ ತಮಿಳುನಾಡು ರಾಜ್ಯದ ಜನರ ಸೇವೆ ಮಾಡುವಂತೆ ಆಗಲಿ' ಎಂದು ಕೋರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News