ಸುಖಾಸುಮ್ಮನೆ ವಾಹನ ತಡೆಯದಂತೆ ಮತ್ತೊಮ್ಮೆ ಡಿಜಿಪಿ ಆದೇಶ

Update: 2022-07-17 12:11 GMT

ಬೆಂಗಳೂರು, ಜು.17: ರಸ್ತೆಗಳಲ್ಲಿ ದಾಖಲೆಗಳ ಪರಿಶೀಲನೆಗೆ ಸುಖಾಸುಮ್ಮನೆ ವಾಹನ ತಡೆಯದಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ-ಐಜಿಪಿ) ಪ್ರವೀಣ್‍ಸೂದ್ ಮತ್ತೊಮ್ಮೆ ಆದೇಶ ಹೊರಡಿಸಿದ್ದಾರೆ.

ವಾಹನ ತಡೆಯುವ ವಿಚಾರಕ್ಕೆ ಸಂಬಂಧಿಸಿದಂತೆ ಎರಡನೆ ಬಾರಿಗೆ ಆದೇಶ ಹೊರಡಿಸಿರುವ ಅವರು, ದಾಖಲೆಗಳ ಪರಿಶೀಲನೆಗೆ ವಾಹನಸವಾರರನ್ನ ನಿಲ್ಲಿಸಬೇಡಿ, ಪಾನಮತ್ತ ಚಾಲನೆ, ಕಣ್ಣಿಗೆ ಕಾಣುವಂತ ನಿಯಮ ಉಲ್ಲಂಘನೆ ಕಂಡರೆ ಮಾತ್ರ ವಾಹನ ನಿಲ್ಲಿಸಬೇಕು. ಪಟ್ಟಣ ಮತ್ತು ಹೆದ್ದಾರಿಗಳಲ್ಲಿ ಎಲ್ಲ ಕಡೆ ಈ ಸೂಚನೆ ಅನುಸರಿಸಬೇಕು. ಈ ಆದೇಶ ಉಲ್ಲಂಘಿಸಿದವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಬೆಂಗಳೂರು ಸೇರಿ ರಾಜ್ಯದ ಎಲ್ಲ ಜಿಲ್ಲೆಗಳಿಗೂ ಈ ಆದೇಶ ಅನ್ವಯವಾಗಲಿದೆ ಆದೇಶದಲ್ಲಿ ಅವರು ಉಲ್ಲೇಖ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News