ಕಾವೇರಿ, ಕೊಡವರ ಬಗ್ಗೆ ಅವಹೇಳನ: ಆರೋಪಿ ದಿವಿನ್ ದೇವಯ್ಯ ಬಂಧನ

Update: 2022-07-17 14:10 GMT
ಕೆ.ಪಿ.ದಿವಿನ್ ದೇವಯ್ಯ- ಆರೋಪಿ 

ಮಡಿಕೇರಿ ಜು.17 : ಕೊಡಗಿನ ಕಾವೇರಿ ಹಾಗೂ ಕೊಡವ ಮಹಿಳೆಯರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಮಡಿಕೇರಿ ನಗರ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.

ವಿರಾಜಪೇಟೆ ತಾಲೂಕಿನ ಪಾಲಂಗಾಲ ಗ್ರಾಮದ ನಿವಾಸಿ ಕೆ.ಪಿ.ದಿವಿನ್ ದೇವಯ್ಯ (29) ಎಂಬಾತನೇ ಬಂಧಿತ ಆರೋಪಿಯಾಗಿದ್ದು, ಈತನ ಮೊಬೈಲ್ ಫೋನ್ ಅನ್ನು ವಶಕ್ಕೆ ಪಡೆಯಲಾಗಿದೆ. 

ಈ ಸಂಬಂಧ ಧಾರ್ಮಿಕ ಭಾವನೆಗೆ ನೋವುಂಟು ಮಾಡಿದ ಆರೋಪದ ಹಿನ್ನೆಲೆ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ ಅವರ ಮಾರ್ಗದರ್ಶನದಲ್ಲಿ ನಗರ ಠಾಣಾ ಪೊಲೀಸರು ಮಾಹಿತಿ ತಂತ್ರಜ್ಞಾನದ ಮೂಲಕ ತನಿಖೆ ಕೈಗೊಂಡಿದ್ದರು. 

ಇತ್ತೀಚೆಗ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಅಪ್ರಾಪ್ತ ಮುಸ್ಲಿಮ್ ಬಾಲಕನೊಬ್ಬನ ಫೋಟೊ ಎಡಿಟ್ ಮಾಡಿ  ಕಾವೇರಿಯನ್ನು ಹಾಗೂ ಕೊಡವರನ್ನು ಅವಹೇಳನ ಮಾಡಿರುವ ಪೋಸ್ಟ್ ಒಂದು ವೈರಲ್ ಆಗಿತ್ತು. ಬಳಿಕ ಬಾಲಕನ ಬಂಧನಕ್ಕೆ ಆಗ್ರಹಿಸಿ ಸಂಘಪರಿವಾರ ಸೇರಿ ವಿವಿಧ ಸಂಘಟನೆಗಳು ಉಗ್ರ ಪ್ರತಿಭಟನೆಯ ಎಚ್ಚರಿಕೆ ನೀಡಿತ್ತು. 

ಬಾಲಕನ ಹೆಸರು ದುರುಪಯೋಗ ಪಡಿಸಿದ್ದು ಯಾರು ಎಂಬುದು ಇನ್ನೂ ತಿಳಿದು ಬಂದಿಲ್ಲ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News