ಶಿವಮೊಗ್ಗ; ರೌಡಿ ಶೀಟರ್ ಕೊಲೆ ಪ್ರಕರಣ: ಆರೋಪಿಗಳು ಶರಣು

Update: 2022-07-19 05:22 GMT
ಹಂದಿ ಅಣ್ಣಿ

ಶಿವಮೊಗ್ಗ: ಐದು ದಿನಗಳ ಹಿಂದೆ ಶಿವಮೊಗ್ಗದ ವಿನೋಬ ನಗರ ಚೌಕಿ ಬಳಿ ನಡೆದಿದ್ದ ರೌಡಿ ಶೀಟರ್ ಹಂದಿ ಅಣ್ಣಿ (ಅಣ್ಣಪ್ಪ) ಹತ್ಯೆ ಪ್ರಕರಣದ ಆರೋಪಿಗಳು ಚಿಕ್ಕಮಗಳೂರು ಎಸ್ ಪಿ ಮುಂದೆ ಶರಣಾಗಿದ್ದಾರೆ.

ಹಂದಿ ಅಣ್ಣಿಯ ಹತ್ಯೆ ಪ್ರಕರಣದ ಎಂಟು ಮಂದಿ ಆರೋಪಿಗಳು ಚಿಕ್ಕಮಗಳೂರು ಎಸ್ ಪಿ ಅಕ್ಷಯ್ ಮುಂದೆ ಶರಣಾಗಿದ್ದಾರೆ. ತಡರಾತ್ರಿ ಎಸ್ಪಿ ಕಚೇರಿಗೆ ಆಗಮಿಸಿದ ಎಂಟು ಮಂದಿ ಆರೋಪಿಗಳು ತಾವೇ ಕೊಲೆ ಮಾಡಿರುವುದಾಗಿ ಎಸ್ ಪಿ ಮುಂದೆ ಹೇಳಿಕೊಂಡಿದ್ದಾರೆ. ಬಳಿಕ ಚಿಕ್ಕಮಗಳೂರು ಪೊಲೀಸರು ಆರೋಪಿಗಳನ್ನು ಶಿವಮೊಗ್ಗ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಜುಲೈ 14ರಂದು ಬೆಳಗ್ಗೆ ಶಿವಮೊಗ್ಗದ ವಿನೋಭ ನಗರದಲ್ಲಿ ರೌಡಿ ಶೀಟರ್ ಹಂದಿ ಅಣ್ಣಿಯ ಕೊಲೆಯಾಗಿತ್ತು. ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ದಾಳಿ ನಡೆಸಿ ಹಂದಿ ಅಣ್ಣಿಯನ್ನು ಹತ್ಯೆಗೈದಿದ್ದರು.

ದುಷ್ಕರ್ಮಿಗಳು ಹಂದಿ ಅಣ್ಣಿ ತಲೆ ಭಾಗಕ್ಕೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ ಪರಿಣಾಮ ಆತ ಸ್ಥಳದಲ್ಲಿಯೇ ಸಾವನ್ನಪ್ಪಿದ್ದ. ಘಟನೆ ಬಳಿಕ ದುಷ್ಕರ್ಮಿಗಳು ಪರಾರಿಯಾಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News