×
Ad

ಸಂಗೊಳ್ಳಿ ರಾಯಣ್ಣ ವೃತ್ತ ನಾಮಕರಣ: ಆಕ್ಷೇಪಣೆ ಆಹ್ವಾನ

Update: 2022-07-19 21:14 IST

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಸಿಟಿ ಬಸ್ ನಿಲ್ದಾಣ ದಿಂದ ನರ್ಮ್ ಬಸ್ ನಿಲ್ದಾಣ ಬಳಿಯಿಂದ ಸರ್ವಿಸ್ ಬಸ್ ನಿಲ್ದಾಣಕ್ಕೆ ಬರುವ ಮಾರ್ಗದಲ್ಲಿರುವ ವೃತ್ತಕ್ಕೆ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ವೃತ್ತ ಎಂದು ನಾಮಕರಣ ಗೊಳಿಸುವ ಕುರಿತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನ ಬಳಗ ಇವರು ಮನವಿ ಸಲ್ಲಿಸಿದೆ.

ಈ ಕುರಿತು ಆಕ್ಷೇಪಣೆ ಹಾಗೂ ಸಲಹೆಗಳಿದ್ದಲ್ಲಿ ಸಾರ್ವಜನಿಕರು ೩೦ ದಿನಗಳ ಒಳಗೆ ನಗರಸಭೆ ಕಚೇರಿಗೆ ಸಲ್ಲಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News