×
Ad

ಜು.24: ಜಿ.ಎಸ್.ಬಿ. ಸಮಾಜ ಬಾಂಧವರಿಗೆ ಶೈಕ್ಷಣಿಕ ಪ್ರೇರಣಾ ಕಾರ್ಯಾಗಾರ, ವಿದ್ಯಾರ್ಥಿವೇತನ ವಿತರಣೆ

Update: 2022-07-20 12:37 IST

ಕಾಪು, ಜು.20: ಜಿಎಸ್‌ಬಿ ಸಮಾಜ ಹಿತರಕ್ಷಣಾ ವೇದಿಕೆ ಕಾರ್ಕಳ ಹಾಗೂ ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಮುದರಂಗಡಿ ಸಹಭಾಗಿತ್ವದಲ್ಲಿ ಶೈಕ್ಷಣಿಕ ಪ್ರೇರಣಾ ಕಾರ್ಯಾಗಾರ, ವಿದ್ಯಾರ್ಥಿ ವೇತನ ವಿತರಣೆ ಮತ್ತು ಸಾಧಕರಿಗೆ ಅಭಿನಂದನೆ ಸಮಾರಂಭವು ಜು.24ರಂದು ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಸಂಕೀರ್ಣದಲ್ಲಿ ನಡೆಯಲಿದೆ.

 ಕಾಪುವಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಜಿ.ಎಸ್.ಬಿ. ಸಮಾಜ ಹಿತರಕ್ಷಣಾ ವೇದಿಕೆಯ ಸಂಚಾಲಕ ಆರ್.ವಿವೇಕಾನಂದ ಶೆಣೈ ಈ ಬಗ್ಗೆ ಮಾಹಿತಿ ನೀಡಿದರು.
ಅಂದು ಬೆಳಗ್ಗೆ 9:30ರಿಂದ ಸಂಜೆ 4ರವರೆಗೆ ಜರುಗುವ ಕಾರ್ಯಕ್ರಮವನ್ನು ಸುಪ್ರೀಂ ಕೋರ್ಟ್ ವಕೀಲ ರವಿಚಂದ್ರ ಕಿಣಿ ಉದ್ಘಾಟಿಸುವರು. ಬೆಂಗಳೂರಿನ ಉದ್ಯಮಿ ಪಿ.ರವೀಂದ್ರ ದಯಾನಂದ ಪೈ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಉಡುಪಿಯ  ಅನಂತ ವೈದಿಕ ಕೇಂದ್ರದ ಚಿಂಪಿ ರಾಮಚಂದ್ರ ಅನಂತ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಉದ್ಯಮಿ ಗೋವಿಂದ ಜಗನ್ನಾಥ ಶೆಣೈ, ವಾಶಿಂಗ್ಟನ್‌ನ ಐಸಿಎಐಯ ಗೋಕುಲ್ ದಾಸ್ ಪೈ, ರತ್ನಾಕರ ಕಾಮತ್, ಪಿ ರಾಮಚಂದ್ರ ಶೆಣೈ ಭಾಗವಹಿಸಲಿದ್ದಾರೆಂದು ಅವರು ತಿಳಿಸಿದರು.

ಶೈಕ್ಷಣಿಕ ಕಾರ್ಯಗಾರ ಹಾಗೂ ಭಾರತೀಯ ಸೇನೆಯಲ್ಲಿನ ಯುವ ಜನರಿಗೆ ಲಭ್ಯವಿರುವ ಅವಕಾಶಗಳು ಹಾಗೂ ಸವಾಲುಗಳು ಇದರ ಬಗ್ಗೆ ಶೈಕ್ಷಣಿಕ ಕಾರ್ಯಗಾರ ನಡೆಯಲಿದೆ. ಲೆಫ್ಟಿನೆಂಟ್ ಕರ್ನಲ್ ಅಜಿತ್ ವಿ. ಭಂಡಾರ್ಕಾರ್ ಅವರ ಜೀವನ ಸಾಧನೆಯ ಸಾಕ್ಷ್ಯಚಿತ್ರ ಮತ್ತು ಉಪನ್ಯಾಸ ಕಾರ್ಯಕ್ರಮ ಜರುಗಲಿದೆ.

  ಎಸೆಸೆಲ್ಸಿ, ಪಿಯುಸಿ, ಸಿಇಟಿ, ನೀಟ್‌ನಂತಹ ಉನ್ನತ ವ್ಯಾಸಂಗದ ಪ್ರವೇಶ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ಜಿಎಸ್ಬಿ ಸಮಾಜದ ವಿದ್ಯಾರ್ಥಿಗಳಿಗೆ ಅಭಿನಂದನೆ ನಡೆಯಲಿದೆ. ವಿದ್ಯಾಪೋಷಕ ನಿಧಿಯಿಂದ ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಯ 500ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಒಟ್ಟು 75 ಲಕ್ಷ ರೂ.ಗೂ ಅಧಿಕ ಮೊತ್ತದ ವಿದ್ಯಾರ್ಥಿ ವೇತನ ನೀಡಲಾಗುವುದು ಎಂದು ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ಕಾಮತ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಜಿಎಸ್‌ಬಿ ಸಮಾಜ ಹಿತರಕ್ಷಣಾ ವೇದಿಕೆಯ ಸಂಚಾಲಕ ಆರ್.ವಿವೇಕಾನಂದ ಶೆಣೈ, ಅಧ್ಯಕ್ಷ ಜಿ.ಸತೀಶ್ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ಕಾಮತ್, ಸಿ.ಎ ಗೋಪಾಲಕೃಷ್ಣ ಭಟ್, ವಿದ್ಯಾಪೋಷಕ್ ಸ್ಕಾಲರ್ ಶಿಪ್ ಫಂಡ್ ನ ಅಧ್ಯಕ್ಷ ಎಸ್.ಎಸ್.ನಾಯಕ್, ಸಂಯೋಜಕ ವಿಜಯ್ ಕುಮಾರ್ ಶೆಣೈ, ಹರೀಶ್ ನಾಯಕ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News