ರಾಜ್ಯ ಹೈಕೋರ್ಟ್‍ನ ನ್ಯಾಯಮೂರ್ತಿ ಹುದ್ದೆಗೆ ಐವರ ಹೆಸರು ಶಿಫಾರಸು

Update: 2022-07-20 15:42 GMT

ಬೆಂಗಳೂರು, ಜು.20: ಕರ್ನಾಟಕ ಹೈಕೋರ್ಟ್‍ಗೆ ಐವರು ನ್ಯಾಯಮೂರ್ತಿಗಳ ನೇಮಕಕ್ಕೆ ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ. ಸುಪ್ರೀಂಕೋರ್ಟ್ ಕೊಲಿಜಿಯಂ ಕೇಂದ್ರ ಸರಕಾರಕ್ಕೆ ಇದೇ 19ರಂದು ಶಿಫಾರಸು ಮಾಡಿದೆ.

ಐವರ ಹೆಸರು: ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಟಿ.ಜಿ.ಶಿವಶಂಕರೇಗೌಡ, ಬೆಂಗಳೂರಿನ ಪ್ರಧಾನ ನಗರ ಮತ್ತು ಸತ್ರ ನ್ಯಾಯಾಧೀಶ ಚಂದ್ರಶೇಖರ ಮೃತ್ಯುಂಜಯ ಜೋಶಿ, ಬೆಂಗಳೂರಿನ ಪ್ರಧಾನ ನಗರ ಮತ್ತು ಸತ್ರ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ಅನಿಲ್ ಭೀಮಸೇನ ಕಟ್ಟಿ, ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶ ಗುರುಸಿದ್ದಯ್ಯ ಬಸವರಾಜ ಹಾಗೂ ಉಮೇಶ್ ಮಂಜುನಾಥ್ ಭಟ್ ಅಡಿಗ ಅವರನ್ನು ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ.

ಕರ್ನಾಟಕ ಹೈಕೋರ್ಟ್‍ನ ಬೆಂಗಳೂರು ಪ್ರಧಾನ ಪೀಠ, ಧಾರವಾಡ ಮತ್ತು ಕಲಬುರ್ಗಿ ಪೀಠಗಳಿಗೆ ಮಂಜೂರಾಗಿರುವ ಒಟ್ಟು ಹುದ್ದೆಗಳ ಸಂಖ್ಯೆ 62. ಸದ್ಯ 45 ನ್ಯಾಯಮೂರ್ತಿಗಳು ಕಾರ್ಯ ನಿರ್ವಹಿಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News