ಪುತ್ರನಿಗೆ ಕ್ಷೇತ್ರ ಬಿಟ್ಟುಕೊಟ್ಟ ಬಿಎಸ್‌ವೈ; ಶಿಕಾರಿಪುರದಿಂದ ವಿಜಯೇಂದ್ರ ಚುನಾವಣೆಯಲ್ಲಿ ಸ್ಪರ್ಧೆ

Update: 2022-07-22 09:23 GMT

ಶಿವಮೊಗ್ಗ: ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಘೋಷಿಸಿದ್ದಾರೆ.

ಶಿಕಾರಿಪುರದ ಅಂಜಾನಪುರ ಡ್ಯಾಂಗೆ ಬಾಗಿನ ಸಲ್ಲಿಸಿ‌ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಶಿಕಾರಿಪುರ ಕ್ಷೇತ್ರದಿಂದ ಪುತ್ರ ಬಿ.ವೈ ವಿಜಯೇಂದ್ರ ಸ್ಪರ್ಧಿಸಲಿದ್ದಾರೆ. ಶಿಕಾರಿಪುರ ತಾಲೂಕಿನ ಜನತೆ ನನಿಗಿಂತ  ಹೆಚ್ಚು  ಮತಗಳ ಅಂತರದಿಂದ ವಿಜಯೇಂದ್ರನನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಹಳೆ ಮೈಸೂರು ಭಾಗದಿಂದ ಸ್ಪರ್ಧಿಸುವಂತೆ ಒತ್ತಡ ಕೇಳಿಬರುತ್ತಿದೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಹಳೇ ಮೈಸೂರು ಭಾಗದಿಂದ ಸ್ಪರ್ಧಿಸುವಂತೆ ಒತ್ತಡ ಇದೆ. ಆದರೆ ನಾನು‌ ಕ್ಷೇತ್ರ ಬಿಟ್ಟುಕೊಡುತ್ತಿರಿಂದ ಬಿ.ವೈ ವಿಜಯೆಂದ್ರ ಶಿಕಾರಿಪುರದಿಂದ ಸ್ಪರ್ಧಿಸಲಿದ್ದಾರೆ ಎಂದರು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News