ಬೆಳ್ತಂಗಡಿ: ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ಆರೋಪ; ಯುವಕರ ಗುಂಪಿನಿಂದ ಇಬ್ಬರ ಮೇಲೆ ಹಲ್ಲೆ, ಓರ್ವ ಮೃತ್ಯು

Update: 2022-07-22 18:41 GMT
ಗಾಯಾಳು ನಾರಾಯಣ ನಾಯ್ಕ್ 

ಬೆಳ್ತಂಗಡಿ, ಜು.22: ಬಾಲಕಿಯ ಮೇಲೆ ವ್ಯಕ್ತಿಯೊಬ್ಬರು ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಯುವಕರ ತಂಡವೊಂದು ಹಲ್ಲೆ ನಡೆಸಿದ್ದು, ಈ ವೇಳೆ ಜಗಳ ತಡೆಯಲು ಬಂದ ವ್ಯಕ್ತಿಗೂ ಹಲ್ಲೆ ಮಾಡಿದ್ದು, ಗಂಭೀರ ಗಾಯಗೊಂಡ ಅವರು ಆಸ್ಪತ್ರೆಗೆ ದಾಖಲಿಸುವ ವೇಳೆ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಪರಾರಿ ಶಾಂತಿನಗರದ ನಿವಾಸಿ ಜಾರಪ್ಪ ನಾಯ್ಕ್ (55) ಮೃತಪಟ್ಟವರು.

ನಾರಾಯಣ ನಾಯ್ಕ್ (47) ಎಂಬವರು ಸ್ಥಳೀಯ ಆರು ವರ್ಷದ ಬಾಲಕಿಗೆ ಕಳೆದ 10 ದಿನಗಳ ಹಿಂದೆ ಲೈಂಗಿಕ ಕಿರುಕುಳ ನೀಡಿದ್ದರು ಎನ್ನಲಾಗಿದೆ. ಈ ವಿಚಾರವಾಗಿ ಅದಾಗಲೆ ರಾಜಿ ಸಂದಾನ ನಡೆದಿತ್ತು. ಆದರೆ ಇಂದು ಸಂಜೆ ವೇಳೆ ಮತ್ತೆ ಬಾಲಕಿಯನ್ನು ಕರೆದು ಮಾತಾಡಿಸಿದ್ದ ಎಂದು ಆರೋಪಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ನಾರಾಯಾಣ ನಾಯ್ಕ್ ನನ್ನು ಯುವಕರ ತಂಡ ತಡೆದು ಹಲ್ಲೆಗೆ ಮುಂದಾಗಿದೆ. ಇದನ್ನು ನೋಡಿದ ಜಾರಪ್ಪ ನಾಯ್ಕ್ ಹಲ್ಲೆ ಬಿಡಿಸಲು ಬಂದಾಗ ಅವರ ಮೇಲೂ ಯುವಕರು ಹಲ್ಲೆ ಮಾಡಿದ್ದು, ಗಂಭೀರ ಗಾಯಗೊಂಡ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆತಂದಿದ್ದಾರೆ.

ಈ ವೇಳೆ ಜಾರಪ್ಪ ನಾಯ್ಕ್ ಮೃತಪಟ್ಟಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಇದೀಗ ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದು, ನಾರಾಯಣ ನಾಯ್ಕ್ ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಜಾರಪ್ಪ ನಾಯ್ಕ್ ಅವರ ಪುತ್ರ ರಾಜಶೇಖರ್ ದೂರು ನೀಡಿದ್ದು, ಪ್ರಕರಣದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News