ಶಿಕಾರಿಪುರದಿಂದ ವಿಜಯೇಂದ್ರ ಸ್ಪರ್ಧಿಸಲಿದ್ದಾರೆ ಎಂಬ ಹೇಳಿಕೆಗೆ ಬಿ.ಎಸ್ ಯಡಿಯೂರಪ್ಪ ಸ್ಪಷ್ಟನೆ
ಬೆಂಗಳೂರು: 'ನಿನ್ನೆ ನಾನು ನೀಡಿದ್ದ ಹೇಳಿಕೆಯಿಂದ ಸಾಕಷ್ಟು ಗೊಂದಲ ಉಂಟಾಗಿದ್ದು, ಶಿಕಾರಿ ಪುರದಲ್ಲಿನ ಕಾರ್ಯಕರ್ತರು ನನ್ನನ್ನೇ ನಿಲ್ಲುವಂತೆ ಒತ್ತಾಯಿಸಿದ್ದಾರೆ. ಬಹುಪಾಲು ನಾನು ವಿಧಾನಸಭೆ ಚುನಾವಣೆಗೆ ನಿಲ್ಲಲು ಆಗೋದಿಲ್ಲ, ಮುಖಂಡರಿಗೆ ಗೊಂದಲಬೇಡ' ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರಗೆ ಎಲ್ಲಿ ಸ್ಪರ್ಧಿಸಿದರೂ ಗೆಲ್ಲುವ ಶಕ್ತಿ ಇದೆ. ನಾನು ಸಲಹೆ ಕೊಡಬಹುದಷ್ಟೇ, ಅಂತಿಮ ತೀರ್ಮಾನ ಕೈಗೊಳ್ಳುವುದು ಹೈಕಮಾಡ್ ಎಂದು ಸ್ಪಷ್ಟಪಡಿಸಿದರು.
'ನನ್ನನ್ನು ಪಕ್ಷದಲ್ಲಿ ಮೂಲೆಗುಂಪು ಮಾಡಲಾಗಿದೆ ಎಂಬುದು ಸುಳ್ಳು, ಇದು ಸತ್ಯಕ್ಕೆ ದೂರವಾದ ಮಾತು. ಪ್ರಧಾನಿ ಮೋದಿ, ಅಮಿತ್ ಶಾ ಸೇರಿದಂತೆ ಪಕ್ಷದ ವರಿಷ್ಠರ ಸೂಚನೆ ಫಾಲಿಸುತ್ತೇವೆ ಎಂದು ಇದೇ ವೇಳೆ ತಿಳಿಸಿದರು.
'ಪಿಸ್ ಐ ಹಗರಣದಲ್ಲಿ ವಿಜಯೇಂದ್ರ ಪಾತ್ರವಿದೆ ಅನ್ನೋದು ಸುಳ್ಳು, ಕಾಂಗ್ರೆಸ್ ನಾಯಕರು ಮೂರ್ಖತನದಿಂದ ಆರೋಪ ಮಾಡುತ್ತಿದ್ದಾರೆ' ಎಂದು ಹೇಳಿದರು.