ಮಂಗಳೂರು-ಹೊಸದುರ್ಗ ನಡುವೆ ವೋಲ್ವೋ ಸಾರಿಗೆ

Update: 2022-07-23 13:16 GMT

ಉಡುಪಿ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಮಂಗಳೂರು ವಿಭಾಗದಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಮಂಗಳೂರು- ಹೊಸದುರ್ಗ ಮಾರ್ಗದಲ್ಲಿ ವೋಲ್ವೋ ಸಾರಿಗೆಯನ್ನು ಪ್ರಾರಂಭಿಸಿದೆ.

ಈ ಬಸ್ಸು ಮಂಗಳೂರಿನಿಂದ ರಾತ್ರಿ ೯:೩೦ಕ್ಕೆ ಹೊರಟು ಸುರತ್ಕಲ್, ಪಡುಬಿದ್ರೆ, ಉಡುಪಿ, ಮಣಿಪಾಲ, ಕುಂದಾಪುರ, ಅಂಪಾರು, ಸಿದ್ಧಾಪುರ, ಮಾಸ್ತಿಕಟ್ಟೆ, ತೀರ್ಥಹಳ್ಳಿ, ಶಿವಮೊಗ್ಗ, ಹೊಳೆಹೊನ್ನೂರು, ಚೆನ್ನಗಿರಿ, ಹೊಳಲ್ಕೆರೆ ಮಾರ್ಗವಾಗಿ ಹೊಸದುರ್ಗಕ್ಕೆ ಬೆಳಗ್ಗೆ ೫:೪೫ಕ್ಕೆ ತಲುಪಲಿದೆ.

ಮರು ಪ್ರಯಾಣದಲ್ಲಿ ಹೊಸದುರ್ಗದಿಂದ ರಾತ್ರಿ ೧೦:೦೦ ಗಂಟೆಗೆ ಹೊರಟು ಮರುದಿನ ಬೆಳಗ್ಗೆ ೬:೧೫ಕ್ಕೆ ಮಂಗಳೂರನ್ನು ತಲಪುತ್ತದೆ. ಮಂಗಳೂರಿನಿಂದ ಹೊಸದುರ್ಗಕ್ಕೆ ಪ್ರತಿ ಪ್ರಯಾಣಿಕರಿಗೆ ಒಟ್ಟು ಪ್ರಯಾಣದರ ೭೦೦ರೂ. ಎಂದು ನಿಗದಿ ಪಡಿಸಲಾಗಿದ್ದು, ಈ ಸಾರಿಗೆಗೆ ಅವತಾರ್ ವ್ಯವಸ್ಥೆ ಮೂಲಕ ಮುಂಗಡ ಆಸನ ಕಾದಿರಿಸುವ ವ್ಯವಸ್ಥೆ ಇರುತ್ತದೆ.

ಸಾರ್ವಜನಿಕರು ಹೆಚ್ಚಿನ ಮಾಹಿತಿಗೆ - www.ksrtc.karnataka.gov.in-  ವೆಬ್‌ಸೈಟ್ ಅಥವಾ ಹತ್ತಿರದ ರಿಸರ್ವೇಶನ್ ಕೌಂಟರ್ ಹಾಗೂ ಮಂಗಳೂರು ಬಸ್ ನಿಲ್ದಾಣ ಮೊ.ನಂ: ೭೭೬೦೯೯೦೭೨೦, ಮಂಗಳೂರು ಮುಂಗಡ ಬುಕ್ಕಿಂಗ್ ಕೌಂಟರ್: ಮೊ.ನಂ: ೯೬೬೩೨೧೧೫೫೩, ಉಡುಪಿ ಬಸ್ ನಿಲ್ದಾಣ ಮೊ.ನಂ : ೯೬೬೩೨೬೬೪೦೦, ಡಾ.ವಿ.ಎಸ್.ಆಚಾರ್ಯ ಬಸ್ ನಿಲ್ದಾಣ ಮೊ.ನಂ ೭೭೯೫೯೮೪೧೮೨ ಹಾಗೂ ಕುಂದಾಪುರ ಬಸ್ ನಿಲ್ದಾಣ ಮೊ.ನಂ :೯೬೬೩೨೬೬೦೦೯ ಅನ್ನು ಸಂಪರ್ಕಿಸಬಹುದು ಎಂದು ಮಂಗಳೂರು ಕ.ರಾ.ರ. ಸಾ.ಸಂ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News