ಬಾಯಿ ಮುಚ್ಚು ಎಂದು ನನಗಷ್ಟೇ ಹೇಳಿದ್ದಲ್ಲ: ಶಾಸಕ ಝಮೀರ್ ಅಹ್ಮದ್

Update: 2022-07-23 16:57 GMT

ಬೆಳಗಾವಿ, ಜು.23: ವೈಯಕ್ತಿಕವಾಗಿ ನನಗೇ ಬಾಯಿ ಮುಚ್ಚು ಎಂದು ಯಾರು ಹೇಳಿಲ್ಲ ಎಂದು ಕಾಂಗ್ರೆಸ್ ಶಾಸಕ ಬಿ.ಝೆಡ್.ಝಮೀರ್ ಅಹ್ಮದ್ ಖಾನ್ ತಿಳಿಸಿದರು.

ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರೂ ಬಾಯಿ ಮುಚ್ಚಿಕೊಂಡು ಪಕ್ಷ ಕಟ್ಟುವ ಕೆಲಸ ಮಾಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಆದರೆ, ವೈಯಕ್ತಿಕವಾಗಿ ನನಗೇ ಬಾಯಿ ಮುಚ್ಚು ಎಂದು ಹೇಳಿಲ್ಲ. ಒಂದು ವೇಳೆ ಹೇಳಿದ್ದರೂ ಅವರು ದೊಡ್ಡವರು ಎಂದರು.

ಸಿದ್ದರಾಮಯ್ಯ ಅವರೇ ಮುಂದಿನ ಮುಖ್ಯಮಂತ್ರಿ ಆಗಲಿ ಎಂಬುದು ರಾಜ್ಯದ ಅಲ್ಪಸಂಖ್ಯಾತರ ಅಭಿಪ್ರಾಯ ಆಗಿದೆ. ಅದನ್ನೆ ನಾನು ಹೇಳಿದ್ದೇನೆ ಎಂದ ಅವರು, ಸಿದ್ದರಾಮೋತ್ಸವ ಕಾರ್ಯಕ್ರಮದಲ್ಲಿ ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮಾಡಲು ರಾಜ್ಯದ ಎಲ್ಲೆಡೆ ಪ್ರವಾಸ ಕೈಗೊಂಡಿದ್ದೇನೆ. ಈ ವೇಳೆ ಸಿದ್ದರಾಮಯ್ಯ ಅವರ ಬಗ್ಗೆಯೇ ಅಲ್ಪಸಂಖ್ಯಾತರು ಒಲವು ಹೊಂದಿದ್ದು ಕಂಡುಬಂದಿದೆ. ಅದನ್ನೇ ನಾನೂ ಉಲ್ಲೇಖಿಸಿದ್ದೇನೆ ಎಂದು ನುಡಿದರು.


ಪರಿಶೀಲನೆ ನಡೆಸುತ್ತೇವೆ

ಪಕ್ಷದ ನಿಯಮ ಉಲ್ಲಂಘನೆ ಸಂಬಂಧ ನಾಯಕರ ಹೇಳಿಕೆ ಕುರಿತು ಪರಿಶೀಲನೆ ನಡೆಸಿ ನೋಟಿಸ್ ನೀಡಲಾಗುವುದು. ಝಮೀರ್ ಅವರು ಯಾವ ಸಂದರ್ಭದಲ್ಲಿ ಹೇಳಿಕೆ ನೀಡಿದ್ದಾರೆ ಎನ್ನುವುದು ಮುಖ್ಯ.

-ಕೆ.ರೆಹ್ಮಾನ್ ಖಾನ್, ಕೆಪಿಸಿಸಿ ಶಿಸ್ತು ಸಮಿತಿ ಅಧ್ಯಕ್ಷ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News