ಬೆಳ್ತಂಗಡಿ : ಕಾರಿನಲ್ಲಿ ಬಂದ ತಂಡದಿಂದ ಯುವಕನಿಗೆ ಹಲ್ಲೆ
ಬೆಳ್ತಂಗಡಿ : ಮನೆಯಿಂದ ಪೇಟೆಗೆ ಸ್ಕೂಟರ್ನಲ್ಲಿ ಹೋಗುತ್ತಿದ್ದ ಯುವಕನೊಬ್ಬನನ್ನು ಕಾರಿನಲ್ಲಿ ಬಂದ ತಂಡ ಬಲವಂತವಾಗಿ ಅಳದಂಗಡಿಯ ಕೆದ್ದು ಶಾಲೆ ಸಮೀಪ ಕರೆದೊಯ್ದು ಹಲ್ಲೆ ಮಾಡಿದ್ದಾರೆ ಎನ್ನಲಾದ ಘಟನೆ ರವಿವಾರ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಅಂಕಾಜೆ ನಿವಾಸಿ ಮ್ಯಾಕಾನಿಕ್ ಕೆಲಸ ಮಾಡುವ ನಿಶೇತ್ (23) ಹಲ್ಲೆಗೆ ಒಳಗಾದ ಯುವಕ ಎಂದು ಗುರುತಿಸಲಾಗಿದೆ.
ಬೊಲೆರೋ ವಾಹನಲ್ಲಿ ಬಂದ ಸುಮಾರು 8 ಮಂದಿಯ ತಂಡ ನಿಶೇತ್ ರನ್ನು ಬಲವಂತವಾಗಿ ಎಳೆದೊಯ್ದು ಮಾರಣಾಂತಿಕ ಹಲ್ಲೆ ಮಾಡಿ, ಮೊಬೈಲ್ ಫೋನ್ ಮತ್ತು ಚಿನ್ನದ ಸರ ಕಿತ್ತುಕೊಂಡಿದ್ದಾರೆ ಎಂದು ದೂರಲಾಗಿದ್ದು, ಘಟನೆ ನಂತರ ಮಾಹಿತಿ ತಿಳಿದ ನಿಶೇತ್ ಕಡೆಯವರು ಮತ್ತು ಕಾರಿನಲ್ಲಿ ಬಂದ ತಂಡದ ನಡುವೆ ಹೊಡೆದಾಟ ನಡೆದಿದೆ ಎಂದು ತಿಳಿದುಬಂದಿದು, ಯುವತಿಗೆ ಮೆಸೇಜ್ ಮಾಡಿದ್ದಾನೆ ಎಂಬ ವಿಚಾರಕ್ಕೆ ಈ ಹಲ್ಲೆ ನಡೆದಿದೆ ಎಂದು ದೂರಲಾಗಿದೆ.
ಘಟನೆ ಬಗ್ಗೆ ವೇಣೂರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಐದು ಮಂದಿಯನ್ನು ವಶಕ್ಕೆ ಪಡೆದಿರುವುದಾಗಿ ತಿಳಿಸಿದ್ದಾರೆ.
ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.