ಮನೆಯಂಗಳಕ್ಕೆ ಬಂದ ಕಾಳಿಂಗ ಸರ್ಪ ರಕ್ಷಣೆ
Update: 2022-07-24 14:16 GMT
ಕುಂದಾಪುರ : ಕಾಡಿನಿಂದ ಜನನಿಬಿಡ ಪ್ರದೇಶಕ್ಕೆ ಬಂದ ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಿರುವ ಘಟನೆ ಸಿದ್ದಾಪುರ ಸಮೀಪದ ಗೆದ್ದೋಡು ಎಂಬಲ್ಲಿ ರವಿವಾರ ನಡೆದಿದೆ.
ಗುರುವಾರ ಕಾಣಿಸಿಕೊಂಡ ಕಾಳಿಂಗ ಸರ್ಪ, ಶನಿವಾರ ಬೆಳಗ್ಗೆ ಮನೆ ಸಮೀಪದ ಶೆಡ್ನಲ್ಲಿ ಕಾಣಿಸಿಕೊಂಡಿತ್ತು. ಕೂಡಲೇ ಮನೆಯವರು ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡಿದ್ದು 11 ಅಡಿ ಉದ್ದದ ಗಂಡು ಕಾಳಿಂಗ ಸರ್ಪವನ್ನು ಅರಣ್ಯ ಇಲಾಖೆ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಉರಗ ತಜ್ಞ ನಾಗರಾಜ ನಾಯ್ಕ್ ಅಲ್ಬಾಡಿ ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ.